ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Banking Scams : ಬ್ಯಾಂಕ್ ಗ್ರಾಹಕರೇ ಎಚ್ಚರ…. ಎಚ್ಚರ…!! SBI , HDFC ಬ್ಯಾಂಕ್ ಹೆಸರಲ್ಲಿ ವಂಚನೆ

Namratha Rao by Namratha Rao
March 21, 2023
in Newsbeat, National, News, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

Banking Scams

ಬ್ಯಾಂಕ್ ಗ್ರಾಟಹಕರೇ ಎಚ್ಚರ…. ಎಚ್ಚರ…!!

Related posts

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

August 13, 2026
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026

SBI , HDFC ಬ್ಯಾಂಕ್ ಹೆಸರಲ್ಲಿ ವಂಚನೆ

ಫಿಶಿಂಗ್ ಬ್ಯಾಂಕ್ SMS ಮೂಲಕ ವಂಚನೆ

ನಿಮ್ಮ ಬ್ಯಾಂಕ್ ಖಾತೆ ಅಪ್ ಡೇಟ್ ಮಾಡುವಂತೆ ಸಂದೇಶ

ಸಂದೇಶದ ಲಿಂಕ್ ಕ್ಲಿಕ್ ಮಾಡಿದ್ರೆ ಖಾತೆಗೆ ಕನ್ನ

ನಾವೆಲ್ಲರೂ ಸದ್ಯಕ್ಕೆ ಡಿಜಿಟಲ್ ಯುಗದಲ್ಲಿ ಬದುಕುತ್ತಿದ್ದೀವಿ..

ಹಣ ವರ್ಗಾವಣೆ , ಅಥವ ವ್ಯವಹಾರಗಳಿಗೆ ನಗದಿಗಿಂತ ಹೆಚ್ಚಾಗಿ ಡಿಜಿಟಲ್ ಪಾವತಿಯನ್ನೇ ದೈನಂದಿನ ಬದುಕಿನಲ್ಲಿ ಹೆಚ್ಚಾಗಿ ಅಳವಡಿಸಿಕೊಂಡಿದ್ದೀವಿ.

ಇದು ತುಂಬಾ ಅನುಕೂಲಕರಿಯಾಗಿದೆ. ಅಷ್ಟೇ ಅಪಾಯಕಾರಿಯೂ ಆಗಿದೆ. ಯಾಕಂದ್ರೆ ಡಿಜಿಟಲ್ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ..

ಪ್ರಪಂಚದಾದ್ಯಂತ ಸೈಬರ್ ವಂಚನೆ ಪ್ರಕರಣಗಳು ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಭಾರತದಲ್ಲಿಯೂ ಸಹ, ಸೈಬರ್ ಸೆಲ್‌ಗಳಲ್ಲಿ ಬ್ಯಾಂಕಿಂಗ್ ಅಥವಾ ಡಿಜಿಟಲ್ ಪಾವತಿಗಳ ವಂಚನೆಯ ಪ್ರಕರಣಗಳು ಪ್ರತಿದಿನ ವರದಿಯಾಗುತ್ತವೆ.

ಜನರಿಂದ ಹಣ ಲೂಟಿಗೆ ಕಳ್ಳರ ನಾನಾ ಟೆಕ್ನಿಕ್ ಗಳನ್ನ ಬಳಸುತ್ತಿದ್ದಾರೆ.

ಇನ್ನೂ ಆಗಾಗ ಫಾರ್ವರ್ಡ್ ಮೆಸೇಜ್ ಗಳು ವಿಶೇಷವಾಗಿ ಬ್ಯಾಂಕ್ ಮೆಸೇಜ್ ಗಳ ಮೂಲಕ ಜನರನ್ನ ಸಂಪರ್ಕಿಸಿ ಒಟಿಟಿ ಪಡೆದು ಬ್ಉಆಂಕ್ ಖಾತೆಯಲ್ಲಿನ ಹಣವನ್ನ ಲಪಟಾಯಿಸುತ್ತಿದ್ದಾರೆ. ಇಂತಹ ಅಪರಾಧಗಳು ದಿನೇ ದಿನೇ ಹೆಚ್ಚಾಗ್ತಲೇ ಇದೆ.

ಅದ್ರಲ್ಲೂ ಫಿಶಿಂಗ್ SMS ಅತ್ಯಂತ ಸಾಮಾನ್ಯ ವಿಧಾನಗಳಲ್ಲಿ ಒಂದಾಗಿದೆ. ಸೈಬರ್ ವಂಚಕರು ಮುಖ್ಯವಾಗಿ ಫಿಶಿಂಗ್ ಬ್ಯಾಂಕ್ ಎಸ್​ಎಮ್​ಎಸ್​ ಮಾಡುವ ಮೂಲಕ ಜನರನ್ನು ಮೋಸಗೊಳಿಸುತ್ತಿದ್ದಾರೆ.

ಸ್ಟ್ಯಾಟಿಸ್ಟಿಕಾ ವರದಿ ಪ್ರಕಾರ.. 2021ರಲ್ಲಿ ಭಾರತದಲ್ಲಿ 4.8 ಸಾವಿರಕ್ಕೂ ಹೆಚ್ಚು ಆನ್‌ ಲೈನ್ ಬ್ಯಾಂಕಿಂಗ್ ವಂಚನೆಗಳು ವರದಿಯಾಗಿವೆ. ಲೋಕಸಭೆಯಲ್ಲಿ ಹಣಕಾಸು ಖಾತೆಯ ರಾಜ್ಯ ಸಚಿವರು ಹಂಚಿಕೊಂಡ ಆರ್‌ಬಿಐ ವರದಿಯ ಪ್ರಕಾರ, ಎಟಿಎಂ/ಡೆಬಿಟ್ ಕಾರ್ಡ್‌ಗಳು, ಕ್ರೆಡಿಟ್ ಅಡಿಯಲ್ಲಿ ಸುಮಾರು ರೂ.128 ಕೋಟಿ ಮೌಲ್ಯದ ವಂಚನೆಗಳನ್ನು ಮಾಡಲಾಗಿದೆ ಎಂದು ಶೆಡ್ಯೂಲ್ಡ್ ಕಮರ್ಷಿಯಲ್ ಬ್ಯಾಂಕ್‌ಗಳು (SBI) ತಿಳಿಸಿವೆ.

ಇತ್ತೀಚೆಗೆ HDFC ಬ್ಯಾಂಕ್​ ತನ್ನ ಗ್ರಾಹಕರನ್ನು ಎಚ್ಚರಿಸಿದೆ. ಕೆಲವು ಬಳಕೆದಾರರು ತಮ್ಮ ಫೋನ್‌ಗಳಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್ ಹೆಸರಿನಲ್ಲಿ ಸಂದೇಶಗಳನ್ನು ಸ್ವೀಕರಿಸುತ್ತಿರುವುದನ್ನು ಕಂಡು ಬ್ಯಾಂಕ್​ಗೆ ಮಾಹಿತಿ ನೀಡಿದಾಗ ಇದೀಗ ಈ ಬ್ಯಾಂಕ್​ ಗ್ರಾಹಕರಿಗೆ ಎಚ್ಚರಿಕೆ ನೀಡುತ್ತಿದೆ.

ಸಂಘಮಿತ್ರ ಮಜುಂದಾರ್ ಎಂಬ ಗ್ರಾಹಕರು ಟ್ವಿಟರ್‌ ನಲ್ಲಿ ತಮಗೆ ಬಂದ ಸಂದೇಶವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ.. ಗ್ರಾಹಕ ನಿಮ್ಮ HDFC NET ಬ್ಯಾಂಕಿಂಗ್ ಅನ್ನು ಇಂದು ಸ್ಥಗಿತಗೊಳಿಸಲಾಗುವುದು. ದಯವಿಟ್ಟು ನಿಮ್ಮ ಪ್ಯಾನ್ ಕಾರ್ಡ್ ಅನ್ನು ಅಪ್ಡೇಟ್​ ಮಾಡಿ. ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ. ಎಂದು ಬರೆಯಲಾಗಿದೆ.

HDFC Bankcare ಫಿಶಿಂಗ್ ಹಗರಣದ ಬಗ್ಗೆ ಗ್ರಾಹಕರಿಗೆ ಎಚ್ಚರಿಸುವ ಕೆಲಸವನ್ನು ಮಾಡುತ್ತಿದೆ. ಹಗರಣಕ್ಕೆ ಸಂಬಂಧಿಸಿದ ಟ್ವೀಟ್‌ ಗಳಿಗೆ ಪ್ರತಿಕ್ರಿಯಿಸಿದ್ದಾರೆ. ಹಾಯ್ ಸಂಗಮಿತ್ರ, PAN ಕಾರ್ಡ್ ಅಥವಾ KYC ಅಪ್ಡೇಟ್​​ ಹೀಗೆ ಯಾವುದೇ ಇತರ ಬ್ಯಾಂಕಿಂಗ್ ಮಾಹಿತಿಯನ್ನು ಕೇಳುವ ಅಪರಿಚಿತ ಸಂಖ್ಯೆಗಳಿಗೆ ಪ್ರತಿಕ್ರಿಯಿಸಬೇಡಿ ಎಂದು ಹೇಳಿದ್ದಾರೆ. HDFC ಬ್ಯಾಂಕ್ ಯಾವಾಗಲೂ ತಮ್ಮ ಅಧಿಕೃತ ID hdfcbk/ hdfcbn ನಿಂದ ಸಂದೇಶಗಳನ್ನು ಕಳುಹಿಸುತ್ತದೆ ಎಂದೂ ಹೇಳಿದ್ದಾರೆ.

ಬ್ಯಾಂಕ್ ಕಳುಹಿಸುವ ಸಂದೇಶಗಳಲ್ಲಿನ ಲಿಂಕ್‌ಗಳು ಯಾವಾಗಲೂ http://hdfcbk.io ಅಡಿಯಲ್ಲಿ ಇರುತ್ತವೆ. ಡೊಮೇನ್ ಅನ್ನು ನೆನಪಿಡಿ. ಬ್ಯಾಂಕ್ ಎಂದಿಗೂ ಪ್ಯಾನ್ ವಿವರಗಳು, OTP, UPI, VPA / MPIN, ಗ್ರಾಹಕ ID ಮತ್ತು ಪಾಸ್‌ವರ್ಡ್, ಕಾರ್ಡ್ ಸಂಖ್ಯೆ, ATM ಪಿನ್ ಮತ್ತು CVV ಗಳನ್ನು ಕೇಳುವುದಿಲ್ಲ. ದಯವಿಟ್ಟು ಅಂತಹ ಮಾಹಿತಿಯನ್ನು ಯಾರೊಂದಿಗೂ ಶೇರ್​ ಮಾಡಿಕೊಳ್ಳಬೇಡಿ ಎಮದು ಬ್ಯಾಂಕ್ ನಿರ್ವಾಹಕರು ಹೇಳಿದ್ದಾರೆ

ಸ್ಕ್ಯಾಮರ್‌ಗಳು ಬ್ಯಾಂಕ್‌ನಂತೆ ಸಂದೇಶಗಳನ್ನು ಕಳುಹಿಸುತ್ತಾರೆ. ಖಾತೆ ವಿವರಗಳು, ಓಟಿಪಿಗಳು, ಗುರುತಿನ ಸಂಖ್ಯೆಗಳಂತಹ ವೈಯಕ್ತಿಕ ಮಾಹಿತಿಯನ್ನು ಕೇಳಲಾಗುತ್ತದೆ. ಜೊತೆಗೆ ನಿಮ್ಮ ಕೆವೈಸಿ, ಪ್ಯಾನ್​ ಅಪ್ಡೇಟ್​ ಮಾಡಿ ಇಲ್ಲವಾದ್ರೆ ಬ್ಯಾಂಕ್ ಖಾತೆ ಬ್ಯಾನ್​ ಆಗುತ್ತೆ ಎಂದು ಹೇಳಿ, ಜೊತೆಗೆ ಒಂದು ಲಿಂಕ್​ ಕಳುಹಿಸುತ್ತಾರೆ. ಈ ಸಂದರ್ಭದಲ್ಲಿ ಮೊಬೈಲ್​ ಬಳಕೆದಾರು ಒಂದು ವೇಳೆ ಆ ಲಿಂಕ್ ಅನ್ನು ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯಲ್ಲಿನ ದುಡ್ಡನ್ನ ವಂಚಕರು ಲಪಟಾಯಿಸುತ್ತಾರೆ.

 

Banking Scams : Bankers beware… Beware…!! Fraud in the name of SBI, HDFC Bank

Tags: banking scamscyber crime
ShareTweetSendShare
Join us on:

Related Posts

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

by admin
August 13, 2026
0

ನಾಗ ಪಂಚಮಿ ಸೋಮವಾರ, ಆಗಸ್ಟ್ 17, 2026 ನಾಗ ಪಂಚಮಿ ಪೂಜೆ ಮುಹೂರ್ತ - 05:51 AM ರಿಂದ 08:29 AM ಅವಧಿ - 02 ಗಂಟೆಗಳು...

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram