ವ್ಯಕ್ತಿಯೊಬ್ಬ ಜನನಿಬಿಡ ಪ್ರದೇಶದಲ್ಲಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ನಂದ್ಯಾಲ್ ನಲ್ಲಿ ನಡೆದಿದೆ.
ಅಲ್ಲದೇ, ಈ ಘಟನೆಯಲ್ಲಿ ಅತ್ತೆಯ ಮೇಲೆ ಕೂಡ ಹಲ್ಲೆ ನಡೆಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ರಂಗಸ್ವಾಮಿ ಎಂಬ ವ್ಯಕ್ತಿಯೇ ಪತ್ನಿ ಕುಮಾರಿ ಹಾಗೂ ಅತ್ತೆಯ ಮೇಲೆ ಆಯುಧದಿಂದ ಹಲ್ಲೆ ನಡೆಸಿದ್ದಾನೆ. ಇದನ್ನು ಅಲ್ಲಿದ್ದ ವ್ಯಕ್ತಿ ರೆಕಾರ್ಡ್ ಮಾಡಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ರಸ್ತೆಯ ಬದಿಯ ಅಂಗಡಿಗಳ ಮಧ್ಯೆ ವ್ಯಕ್ತಿ ನಿರ್ದಯಿಯಾಗಿ ಹಲ್ಲೆ ನಡೆಸಿದ್ದಾನೆ. ಭೀಕರತೆಯಲ್ಲಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ತೆರಳಿದ ಪೊಲೀಸರು ರಂಗಸ್ವಾಮಿಯನ್ನು ಬಂಧಿಸಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.