ಅವಕಾಶ ಕೊಟ್ಟಿದ್ದೇ ದೊಡ್ಡದ್ದು, ಬಿಎಸ್ ವೈ ಕೆಳಗಿಳಿಯೋದು ಪಕ್ಕಾ : basanagouda-patil-yatnal
ಬೆಂಗಳೂರು : ಪಕ್ಷದ ಸಿದ್ದಾಂತದ ಹಿನ್ನೆಲೆಯಲ್ಲೆ ಎರಡು ವರ್ಷ ಅವಕಾಶ ಕೊಟ್ಟಿದ್ದೇ ದೊಡ್ಡದ್ದು. ಮೇ 2 ರ ನಂತರ ಸಿಎಂ ಬದಲಾಗೋದು ಪಕ್ಕಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೇ 2 ರ ನಂತರ ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಯೋದು ಗ್ಯಾರಂಟಿ.
ಮೇ 2ರ ನಂತರ ಯಾವ ಸಮಯದಲ್ಲಾದರೂ ಬದಲಾವಣೆ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಬಿಜೆಪಿ ಉಳಿಯಬೇಕು ಎಂದರೆ ಮೇ 2 ರ ನಂತರ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ತೆಗೆಯಲೇಬೇಕು.
ಇಲ್ಲ ಅಂದರೆ ಪಕ್ಷ ಉಳಿಯೋದಿಲ್ಲ ಎಂದು ಎಂದು ಮಾರ್ಮಿಕವಾಗಿ ನುಡಿದರು.
ಏಪ್ರಿಲ್ 17 ರ ನಂತರ ಶಾಸಕರು ಸಚಿವರು ಬಹಳ ಮಂದಿ ರೊಚ್ಚಿಗೇಳುವವರಿದ್ದಾರೆ ಎಂದು ತಿಳಿಸಿದ ಯತ್ನಾಳ್, ಸೂರ್ಯ ಚಂದ್ರ ಇರುವವರೆಗೆ ಯಡಿಯೂರಪ್ಪನವರೇ ಸಿಎಂ ಅಂದ್ರೆ ಏನರ್ಥ?
ಯಡಿಯೂರಪ್ಪ ಫ್ಯಾಮಿಲಿಗೇನಾದರೂ ರಾಜ್ಯವನ್ನು ಬರೆದುಕೊಟ್ಟಿದ್ದಾರಾ.. ಎಂದು ಪ್ರಶ್ನೆ ಮಾಡಿದರು.
