ಸಿಎಂ ಕುಟುಂಬದಿಂದ ಸಾವಿರಾರು ಕೋಟಿ ಭ್ರಷ್ಟಾಚಾರ : ಯತ್ನಾಳ್
ವಿಜಯಪುರ : ಯಡಿಯೂರಪ್ಪನವರ ಇಡೀ ಕುಟುಂಬ ಲೂಟಿ ಮಾಡುತ್ತಿದೆ. ಹಾವು ಚೇಳುಗಳು ಸಿಎಂ ಮನೆಯಲ್ಲಿಯೇ ಇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಪುತ್ರನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಮಕ್ಕಳು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಈಗ ಸಿಎಂ ಅವರನ್ನು ಹಿಡಿದಿಟ್ಟುಕೊಂಡಿದ್ದಾರೆ. ಯಡಿಯೂರಪ್ಪ ಪ್ರತಿಪಕ್ಷ ನಾಯಕರಾಗಿದ್ದಾಗ ಅವರ ನಿವಾಸದಲ್ಲಿ ಯಾರೂ ಇರುತ್ತಿರಲಿಲ್ಲ.
ಈಗ ಸಿಎಂ ಆದ ನಂತರ ಅವರ ಇಡೀ ಕುಟುಂಬ ಬಂದು ಅವರ ನಿವಾಸ ಸೇರಿ ಬಿಟ್ಟಿದೆ. ಅವರ ಕುಟುಂಬದಿಂದ ಸಿಎಂ ಹೆಸರು ಕೆಡುತ್ತಿದೆ. ಯಡಿಯೂರಪ್ಪ ಸಂಪೂರ್ಣವಾಗಿ ಬದಲಾಗಿದ್ದಾರೆ.
ವಿಶೇಷವಾಗಿ ವಿಜಯೇಂದ್ರ, ಅವರ ಕುಟುಂಬದವರಿಂದ ಹೆಸರು ಕೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ವಿಜಯೇಂದ್ರ ಅವರ ಚೇಲಾಗಳೆಲ್ಲ, ರಾತ್ರಿ ವ್ಯವಸ್ಥೆ ಮಾಡುವರೆಲ್ಲ ಈಗ ನಿಗಮ, ಮಂಡಳಿ ಅಧ್ಯಕ್ಷ, ನಿರ್ದೇಶಕರಾಗಿದ್ದಾರೆ. ವಿಜಯೇಂದ್ರನ ದೊಡ್ಡ ತಂಡವಿದೆ.
ತಮಗೆ ಬೇಡವಾದವರ ನಕಲಿ ಸಿಡಿ ತಯಾರಿಸುವ ಕೇಂದ್ರವಿದೆ. ಈ ಬಗ್ಗೆ ತಮ್ಮ ಬಳಿ ಮಾಹಿತಿಯಿದೆ ಎಂದು ಗಂಭೀರ ಆರೋಪ ಮಾಡಿದರು.
ಯಡಿಯೂರಪ್ಪ ಪುತ್ರ ವ್ಯಾಮೋಹದ ಪರಾಕಾಷ್ಟೆ ತಲುಪಿದ್ದಾರೆ. ಸುತ್ತೂರ ಶ್ರೀಗಳಿಗೆ ನೇತೃತ್ವ ತೆಗೆದುಕೊಳ್ಳಲು ಹೇಳಿದ್ದಾರೆ. ಮೊನ್ನೆ ವೀರಶೈವ ಲಿಂಗಾಯಿತರನ್ನು ಒಡೆಯಲು ಪ್ರಯತ್ನಿಸಿದರು, ವಿಫಲವಾಯಿತು. ವೀರಶೈವ ಲಿಂಗಾಯಿತರನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಎಚ್ಚರಿಸಿದರು.

ನಮ್ಮದು ಕಾಂಗ್ರೆಸ್, ಮುಲಾಯಂ ಸಿಂಗ್, ಲಾಲೂ ಪ್ರಸಾದ್, ದೇವೇಗೌಡರಂತೆ ಕುಟುಂಬ ಪಕ್ಷವಲ್ಲ. ನಮ್ಮದು ಕಾರ್ಯಕರ್ತರ ಪಕ್ಷ. ಪ್ರಧಾನಿಯ ಆಶಯದಂತೆ ಕುಟುಂಬ ರಾಜಕೀಯ ಬಿಡಬೇಕು. ಆದ್ದರಿಂದ ವಿಜಯೇಂದ್ರ ಕುಟುಂಬದಲ್ಲಿ ಎಲ್ಲರೂ ರಾಜಕೀಯ ಮಾಡಬಾರದು.
24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರು ರಾಜೀನಾಮೆ : ರಮೇಶ್ ಜಾರಕಿಹೊಳಿ
ಒಬ್ಬರು ಮಾತ್ರ ರಾಜಕೀಯ ಮಾಡಿ, ಬೆಂಗಳೂರಿನಲ್ಲಿ ನಿಮಗೆ ಸೇರಿದ ಸಾಕಷ್ಟು ವ್ಯವಹಾರವಿದೆ. ನೂರಾರು ಮನೆಗಳಿವೆ. ಸಿಎಂ ಮನೆಯಲ್ಲಿ ಕುಳಿತು ವಸೂಲಿ ಮಾಡುವ ಕೆಲಸ, ವರ್ಗಾವಣೆಯನ್ನು ನೀವೇ ಮಾಡುತ್ತಿದ್ದೀರಿ.
ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಅವರಿಗೇನೂ ತಿಳಿಯುತ್ತಿಲ್ಲ, ಅದನ್ನು ನಿಮ್ಮ ಇಡೀ ಕುಟುಂಬ, ಸುಮಾರು 35 ಜನ ಸಿಎಂ ಗೃಹ ಕಚೇರಿಯಲ್ಲಿ ಕುಳಿತುಕೊಂಡು ವ್ಯವಹಾರ ಮಾಡುತ್ತಿದ್ದೀರಿ. ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ಮಾಡಿದ್ದೀರಿ ಎಂದು ಕಿಡಿಕಾರಿದರು.
ಇನ್ನು ವಿಶೇಷ ವಿಮಾನದಲ್ಲಿ ಮೊನ್ನೆ ಇಡೀ ಕುಟುಂಬ ಮಾರಿಷಸ್ ಗೆ ವಿಶೇಷ ವಿಮಾನ ತೆಗೆದುಕೊಂಡು ಹೋಗಿದ್ದೀರಿ. ಅಲ್ಲಿಗೆ ಯಾಕೆ ಹೋಗಿದ್ದೀರಿ? ಏನು ಕೆಲಸವಿತ್ತು? ಹಣದ ವ್ಯವಹಾರ ಇತ್ತು? ನಮ್ಮ ಹೋರಾಟ ತತ್ವಾಧಾರಿತ ಹೋರಾಟ. ಯಡಿಯೂರಪ್ಪ ಬಹಳ ದುಡಿದಿದ್ದಾರೆ. ಅವರನ್ನು ಮುಕ್ತರಾಗಿ ಕೆಲಸ ಮಾಡಲು ಬಿಡಿ, ಅವರು ಸಿಎಂ ಆದ ಮೇಲೆ ಯಾಕೆ ಅವರ ನಿವಾಸದಲ್ಲಿ ಉಳಿದಿದ್ದೀರಿ ಎಂದು ಯತ್ನಾಳ್ ಪ್ರಶ್ನಿಸಿದರು.
ವಿಜಯೇಂದ್ರನ ಸರ್ವಾಧಿಕಾರ, ದುರಹಂಕಾರ ಬಗ್ಗೆ ಎಲ್ಲ ಶಾಸಕರ ಅಸಮಾಧಾನವಿದೆ. ಕೆಲವು ಸಚಿವರು ವಿಜಯೇಂದ್ರ ಬಳಿ ಹೋದರೆ ಕುಳಿತುಕೊಳ್ಳಲು ಕುರ್ಚಿ ಕೂಡ ಇಲ್ಲ.

ಅಧಿಕಾರಕ್ಕಾಗಿ ಎಲ್ಲರೂ ಸುಮ್ಮನಿದ್ದಾರೆ. ಯಡಿಯೂರಪ್ಪ ಅವರ ಇಡೀ ಕುಟುಂಬ ಲೂಟಿ ಮಾಡುತ್ತಿದೆ. ಪ್ರಧಾನಿ ಪ್ರಕಾರ ನಾ ಖಾವೂಂಗಾ, ನಾ ಖಾನೆ ದೂಂಗಾ ಅಂತಾರೆ.ಅವರ ಆಶಯದಂತೆ ನಾನು ಹೋರಾಟ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಇನ್ನು ಎಂದೂ ಲಿಂಗಪೂಜೆ ಮಾಡದ ವಿಜಯೇಂದ್ರ ಚಿತ್ರದುರ್ಗ ಸ್ವಾಮೀಜಿ ಹಿಡಿದುಕೊಂಡು ಲಿಂಗಪೂಜೆ ಮಾಡಿದ ಫೋಟೋ ತೆಗೆಸಿಕೊಂಡಿದ್ದಾರೆ. ಪ್ರತಿದಿನ ಪೂಜೆ ಮಾಡ್ತಾರೆ, ಇದು ಬರೀ ನಾಟಕ ಕಂಪನಿ.ರೂ. 10 ಕೋ. ಖರ್ಚು ಮಾಡಿ ಬೆಂಗಳೂರಿನಲ್ಲಿ ಚಿತ್ರದುರ್ಗ ಸ್ವಾಮೀಜಿಗಳನ್ನು ಹಿಡಿದುಕೊಂಡು ಕಾರ್ಯಕ್ರಮ ಮಾಡಿದರು.
ಅಂದು ಸುತ್ತೂರ ಸ್ವಾಮೀಜಿ ಇವರಿಗೆ ನೆನಪಿಗೆ ಬರಲ್ಲಲಿಲ್ಲ. ಈಗ ಮೈಸೂರಿಗೆ ಹೋಗಿ ಸುತ್ತೂರು ಸ್ವಾಮೀಜಿಗಳಿಗೆ ಜೈ ಅಂತಾರೆ. ಅವರು ಸಿಗದಿದ್ದರೆ ಮುಂದೆ ತುಮಕೂರು ಸ್ವಾಮೀಜಿಗಳನ್ನು ಹಿಡಿದುಕೊಂಡು ಜೈ ಅಂತಾರೆ. ಅಲ್ಲಿಯೂ ಲಾಭವಾಗದಿದ್ದರೆ ಅಮಿತ್ ಶಾ ಜೈ ಅಂತಾರೆ ಎಂದು ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದರು.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








