ಯಾರು ರಾಜಾಹುಲಿ ಆಗ್ತಾರೋ.. ಯಾರು ಇಲಿ ಆಗುತ್ತಾರೋ : ಯತ್ನಾಳ್ ವಾರ್ನಿಂಗ್
ತುಮಕೂರು : ಪಂಚಮಸಾಲಿ ಮೀಸಲಾತಿ ಹೋರಾಟವನ್ನ ವಿಫಲಗೊಳಿಸುವ ಪ್ರಯತ್ನ ನಡೆದಿದೆ. ವೀರಶೈವ ಲಿಂಗಾಯತ ಸಮುದಾಯವನ್ನು ಹೈಜಾಕ್ ಮಾಡಿ..ಪಂಚಮಸಾಲಿ ಸಮುದಾಯದ ವಿರುದ್ದ ಎತ್ತಿಕಟ್ಟುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯದ ಸಮಾವೇಶದ ಸ್ಥಳ, ದಿನಾಂಕ ನಿಗದಿಯಾಗಿದೆ. ರಾಜ್ಯದ ಮೂಲೆ ಮೂಲೆಯಿಂದ ಲಕ್ಷಾಂತರ ಜನರು ಸಮಾವೇಶಕ್ಕೆ ಸೇರಲಿದ್ದಾರೆ. ಈ ಹೋರಾಟವನ್ನು ವಿಫಲಗೊಳಿಸುವ ಪ್ರಯತ್ನ ನಡೆದಿದೆ. ವೀರಶೈವ ಲಿಂಗಾಯತ ಸಮುದಾಯವನ್ನು ಹೈಜಾಕ್ ಮಾಡಿ.. ಪಂಚಮಸಾಲಿ ಸಮುದಾಯದ ವಿರುದ್ದ ಎತ್ತಿಕಟ್ಟುವ ಪ್ರಯತ್ನ ನಡೆಯುತ್ತಿದೆ. ಇದಕ್ಕೆ ಅವಕಾಶ ನೀಡಲ್ಲ. ಹೀಗಾಗಿ ನಮಗೆ ಎಲ್ಲಾ ಶ್ರೀಗಳು ಬೆಂಬಲ ನೀಡಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಕಿಡಿಕಾರಿದ ಅವರು, ಕೇವಲ ಮಗನ ಭವಿಷ್ಯಕ್ಕಾಗಿ, ರಾಜಕೀಯಕ್ಕಾಗಿ ಇದನ್ನು ಬಳಸಿಕೊಳ್ಳಲಾಗುತ್ತದೆ. ಕೇಂದ್ರದಲ್ಲಿ ಲಿಂಗಾಯತ ಸಮುದಾಯ ನಮ್ಮ ಜೊತೆಗಿದೆ ಎಂದು ಬಿಂಬಿಸಿಕೊಳ್ಳಲಾಗಿದೆ. ಬಹಳ ಕುತಂತ್ರ ನಡೆದಿದೆ. ಯಾವ ಬೆದರಿಕೆಗೂ ಅಂಜುವುದಿಲ್ಲ. ನೋಟೀಸ್ ಕೊಟ್ಟಿದ್ದಾರೆ ಎನ್ನಲಾಗಿದೆ. ಭಯಹುಟ್ಟಿಸುವ ಪ್ರಯತ್ನ ನಡೆದಿದೆ. ಈವರೆಗೂ ಯಾವುದೇ ನೋಟಿಸ್ ಬಂದಿಲ್ಲ. ವಿಜಯೇಂದ್ರಗೆ ಹೇಗೆ ಗೊತ್ತಾಯ್ತು ನನಗೆ ನೋಟಿಸ್ ಬಂದಿದೆ ಅಂತಾ..? ಎಂದು ಪ್ರಶ್ನಿಸಿದರು.
ಮೂರು ದಿನವಾಗಿದೆ ನೋಟಿಸ್ ಎಲ್ಲೂ ಕಾಣಿಸಿಕೊಂಡಿಲ್ಲ. ವಿಜಯೇಂದ್ರ ಕೂಡ ನೋಟಿಸ್ ಕೊಟ್ಟಿರುವುದನ್ನು ಹೇಳಿದ್ದಾರೆ. ಪಕ್ಷದನಾಯಕರಾಗಿ ಹಗುರವಾಗಿ ಮಾತನಾಡಬಾರದು. ನಮ್ಮ ಅಪ್ಪ ಮುಖ್ಯಮಂತ್ರಿಯಾಗಿದ್ದಾರೆ ಎಂದು ಪೆÇಲೀಸನ್ನು ಬಳಸಬಾರದು. ವಿಜಯೇಂದ್ರ ಯಾಕೆ ಒಂದು ವಾರ ದೆಹಲಿಗೆ ಹೋಗಿದ್ರು. ಯಾವ ತನಿಖಾ ಇಲಾಖೆ ಇವರನ್ನು ವಿಚಾರಣೆ ಮಾಡಿದ್ರು. ಎಲ್ಲವೂ ಗೊತ್ತಿದೆ. ನಿರಾಣಿ, ವಿಜಯೇಂದ್ರ ಸೇರಿ ಪಂಚಮಸಾಲಿ ಸಮುದಾಯ ಒಡೆಯುವ ಪ್ರಯತ್ನ ನಡೆದಿದೆ. ಯಾರು ರಾಜಾಹುಲಿ ಆಗುತ್ತಾರೋ.. ಬೆಟ್ಟದ ಇಲಿ ಆಗುತ್ತಾರೋ ಗೊತ್ತಿಲ್ಲ. ಲೂಟಿ ಹೊಡೆದ ಹಣದಿಂದ ಕುತಂತ್ರಗಳು ನಡಿತಿದೆ. ನಿನ್ನೆ ನಡೆದ ಅಧಿಕಾರಿಗಳ ವರ್ಗಾವಣೆ ಯಲ್ಲೂ ಹಣದ ಆಟ ನಡೆದಿದೆ. ರಾಜ್ಯದಲ್ಲಿ ವಿರೋಧ ಪಕ್ಷಸತ್ತಿದೆ. ಅವರೂ ಇವರೊಂದಿಗೆ ಅಡ್ಜೆಸ್ಟ್ ಆಗಿದ್ದಾರೆ ಎಂದು ಹೇಳಿದರು.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









