ಸಿಎಂ ಬಿಎಸ್ ವೈ ಗೆ ಫೈಲ್ ಗೆ ಸಹಿ ಹಾಕುವ ಶಕ್ತಿಯೂ ಇಲ್ಲ – ಯತ್ನಾಳ್
ಸಿಎಂ ಯಡಿಯೂರಪ್ಪಗೆ ತಮ್ಮ ಬಳಿ ಬರುವ ಫೈಲ್ ಗೇ ಸಹಿ ಹಾಕಲು ಶಕ್ತಿಯಿಲ್ಲ ಎಂದು ಮತ್ತೆ ಸಿಎಂ ಯಡಿಯೂರಪ್ಪ ಕಾರ್ಯವೈಖರಿ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಅಲ್ಲದೇ ಸಿಎಂ ಮಗನ ಒತ್ತಾಯಕ್ಕೆ ಮಣಿದು ವಿಧಾನಸೌಧಕ್ಕೆ ಹೋಗುತ್ತಾರೆ. ಸಭೆಗಳು ಕೇವಲ 15 ನಿಮಿಷ ಮಾತ್ರ ನಡೆಯುತ್ತದೆ. ಕೊರೊನಾ ಸಭೆ, ಸಚಿವ ಸಂಪುಟದ ಸಭೆ ಎಲ್ಲವೂ ಅಷ್ಟೇ. 30 ರಿಂದ 40 ವಿಷಯ ಇದ್ದರು 30 ನಿಮಿಷದಲ್ಲಿ ಮುಗಿಯುತ್ತದೆ.
ಸಿಎಂ ಯಡಿಯೂರಪ್ಪ ನಿಷ್ಕ್ರಿಯರಾಗಿದ್ದಾರೆ, ಅವರ ಮಗ ಆಡಳಿತ ನಡೆಸುತ್ತಿದ್ದಾನೆ. ನ್ಯಾಯಾಂಗದ ತೀರ್ಪಿನ ಮೇಲೆ ಪ್ರಭಾವ ಬೀರಲು ಯತ್ನಸಿದ್ದಾರೆ. ಎಲ್ಲರನೂ ಖರೀದಿ ಮಾಡುತ್ತೇವೆ ಅನ್ನೋ ಭಾವನೆ ಇದೆ. ನ್ಯಾಯಾಂಗವನ್ನು ಖರೀದಿ ಮಾಡುತ್ತೇನೆ ಅನ್ನೋ ಮೂರ್ಖತನದಲ್ಲಿ ಇದ್ದಾರೆ.
ಆದರೆ ರಾಜ್ಯ ದೇಶದ ನ್ಯಾಯಾಂಗ ವ್ಯವಸ್ಥೆ ಇಂತಹ ಆಸೆ ಆಮಿಷಗಳಿಗೆ ಒಳಗಾಗುವುದಿಲ್ಲ. ಐತಿಹಾಸಕ ಕರ್ನಾಟಕವನ್ನು ಭ್ರಷ್ಟಾಚಾರಿಗಳಿಂದ ಮುಕ್ತ ಮಾಡುವ ತೀರ್ಪು ನೀಡುತ್ತಾರೆ ಅನ್ನೋ ವಿಶ್ವಾಸವಿದೆ ಎಂದಿದ್ದಾರೆ.