ಸಿದ್ದರಾಮಯ್ಯ ಡಿಕೆಶಿ ವಿಜಯೇಂದ್ರ ಜೊತೆ ಅಡ್ಜೆಸ್ಟ್ ಆಗಿದ್ದಾರೆ – ಯತ್ನಾಳ್
ಮೈಸೂರು : ವಿಜಯೇಂದ್ರ ಬಿಜೆಪಿ ಪಕ್ಷ ಒಡೆಯಲು ಮುಂದಾಗಿದ್ದಾನೆ. ನಿನ್ನೆ ಈ ಬಗ್ಗೆ ಕ್ಲಬ್ ನಲ್ಲಿ ಸಭೆ ನಡೆದಿದೆ. ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಷಡ್ಯಂತರ ನಡೆಸಲಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಇದೇ ವೇಳೆ ಯತ್ನಾಳ್ ರಾಜೀನಾಮೆ ನೀಡಿ ಹೊರಬರಲಿ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಮೊದಲು ರಾಜೀನಾಮೆ ನೀಡಲಿ. ಸಿದ್ದರಾಮಯ್ಯ ಡಿಕೆಶಿ ವಿಜಯೇಂದ್ರ ಜೊತೆ ಅಡ್ಜೆಸ್ಟ್ ಆಗಿದ್ದಾರೆ. ಪರಸ್ಪರ ಭೇಟಿಯಾಗಿ ಸಲಹೆ ಕೊಡುತ್ತಾರೆ. 104 ಸ್ಥಾನ ಯಡಿಯೂರಪ್ಪರಿಂದ ಬಂದಿಲ್ಲ. ಬಿಜೆಪಿ ಕಾರ್ಯಕರ್ತರು ಸ್ಥಳೀಯ ನಾಯಕರ ಪರಿಶ್ರಮ. ದೇಶದ ಪ್ರಧಾನಿ ನೋಡಿ ರಾಜ್ಯದ ಜನರು ಮತ ಹಾಕಿದ್ದಾರೆ. ಬಿಜೆಪಿಯ ಮೂಲ ಸಿದ್ದಾಂತ ತಳಹದಿಯಿಂದ ಬಂದಿದೆ. ಎಲ್ಲಾ ಶ್ರೇಯಸ್ಸು ವ್ಯಕ್ತಿಗೆ ಕೊಡಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ಧಾರೆ.
ಅಲ್ಲದೇ ಸಿಎಂ ಮಗನ ಒತ್ತಾಯಕ್ಕೆ ಮಣಿದು ವಿಧಾನಸೌಧಕ್ಕೆ ಹೋಗುತ್ತಾರೆ. ಸಭೆಗಳು ಕೇವಲ 15 ನಿಮಿಷ ಮಾತ್ರ ನಡೆಯುತ್ತದೆ. ಕೊರೊನಾ ಸಭೆ, ಸಚಿವ ಸಂಪುಟದ ಸಭೆ ಎಲ್ಲವೂ ಅಷ್ಟೇ. 30 ರಿಂದ 40 ವಿಷಯ ಇದ್ದರು 30 ನಿಮಿಷದಲ್ಲಿ ಮುಗಿಯುತ್ತದೆ.
ಸಿಎಂ ಯಡಿಯೂರಪ್ಪ ನಿಷ್ಕ್ರಿಯರಾಗಿದ್ದಾರೆ, ಅವರ ಮಗ ಆಡಳಿತ ನಡೆಸುತ್ತಿದ್ದಾನೆ. ನ್ಯಾಯಾಂಗದ ತೀರ್ಪಿನ ಮೇಲೆ ಪ್ರಭಾವ ಬೀರಲು ಯತ್ನಸಿದ್ದಾರೆ. ಎಲ್ಲರನೂ ಖರೀದಿ ಮಾಡುತ್ತೇವೆ ಅನ್ನೋ ಭಾವನೆ ಇದೆ. ನ್ಯಾಯಾಂಗವನ್ನು ಖರೀದಿ ಮಾಡುತ್ತೇನೆ ಅನ್ನೋ ಮೂರ್ಖತನದಲ್ಲಿ ಇದ್ದಾರೆ. ಆದರೆ ರಾಜ್ಯ ದೇಶದ ನ್ಯಾಯಾಂಗ ವ್ಯವಸ್ಥೆ ಇಂತಹ ಆಸೆ ಆಮಿಷಗಳಿಗೆ ಒಳಗಾಗುವುದಿಲ್ಲ. ಐತಿಹಾಸಕ ಕರ್ನಾಟಕವನ್ನು ಭ್ರಷ್ಟಾಚಾರಿಗಳಿಂದ ಮುಕ್ತ ಮಾಡುವ ತೀರ್ಪು ನೀಡುತ್ತಾರೆ ಅನ್ನೋ ವಿಶ್ವಾಸವಿದೆ ಎಂದಿದ್ದಾರೆ.
ಸಿಎಂ ಬದಲಾಯಿಸದಿದ್ದರೆ ಬಿಜೆಪಿಗೆ ಉಳಿಗಾಲವಿಲ್ಲ : ಯತ್ನಾಳ
ಲಕ್ಷ್ಮಣ ಸವದಿ ಪುತ್ರನ ಕಾರು ಅಪಘಾತ : ಕಾರ್ ನಲ್ಲಿ ನನ್ನ ಮಗ ಇರಲಿಲ್ಲ – ಡಿಸಿಎಂ ಸವದಿ