ವಿಜಯೇಂದ್ರ ಬಳಿ ನಾಯಕತ್ವ ಗುಣವಿಲ್ಲ , ಹಣವಿದೆ – ಯತ್ನಾಳ್
ಹಾವೇರಿ : ವಿಜಯೇಂದ್ರ ಬಳಿ ನಾಯಕತ್ವ ಗುಣವಿಲ್ಲ, ಸಾವಿರಾರು ಕೋಟಿ ದುಡ್ಡಿದೆ. ಹೀಗಾಗಿ ಮಗನನ್ನು ಉಪಚುನಾವಣೆಗೆ ಬಿಟ್ಟಿದ್ದಾರೆ. ರಾಜ್ಯದಿಂದ ಅವರು ಸಾವಿರಾರು ಕೋಟಿ ಲೂಟಿ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಹೌದು ಸದಾ ಸ್ವಪಕ್ಷ, ನಾಯಕರ ವಿರುದ್ಧವೇ ಕಿಡಿಕಾರಿ ಸುದ್ದಿಯಲ್ಲಿರುವ ಯತ್ನಾಳ್ ಈ ಬಾರಿ ಅಂತಹದ್ದೇ ಮತ್ತೊಂದು ಹೇಳಿಕೆ ನೀಡಿದ್ದಾರೆ. ಅಲ್ಲದೇ ಯಡಿಯೂರಪ್ಪ ಪುತ್ರ ವ್ಯಾಮೋಹದಿಂದ ತುಂಬಿ ತುಳುಕುತ್ತಿದ್ದಾರೆ. ವಿಜಯೇಂದ್ರ ಬಳಿ ರೊಕ್ಕ ಇದ್ದು, ಹಂಚಲು ಅಲ್ಲಿ ಬಿಟ್ಟಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಅಷ್ಟೇ ಅಲ್ಲದೇ ಮತ್ತೊಂದು ಸ್ಪೋಟಕ ಮಾಹಿತಿ ನೀಡಿರುವ ಅವರು ವಿದೇಶಿ ಬ್ಯಾಂಕ್ ಗಳಲ್ಲೂ ಅಪಾರ ಪ್ರಮಾಣದ ಹಣ ಇಟ್ಟಿದ್ದಾರೆ. ಸದ್ಯದಲ್ಲೇ ಫೆಡರಲ್ ಬ್ಯಾಂಕ್ ಹಗರಣ ಹೊರ ಬರುತ್ತೆ ಎಂದಿದ್ದಾರೆ.
ಇನ್ನೂ ಯಡಿಯೂರಪ್ಪ ಬಿಜೆಪಿ ಕಟ್ಟಿದಾಗ ಹಣ ಹಂಚುವ ಪರಿಸ್ಥಿತಿ ಇರಲಿಲ್ಲ. ನಾವೆಲ್ಲ ಅತಿ ಕಡಿಮೆ ಹಣದಲ್ಲಿ ಎಂಎಲ್ಎ, ಎಂಪಿ ಆಗಿದ್ದೇವೆ. ಈಗ ಯಡಿಯೂರಪ್ಪ ಕಾಲದಲ್ಲಿ ಹಣ ಹಂಚುವ ಪರಿಸ್ಥಿತಿ ಬಂದಿದೆ.
ಇವತ್ತು ಎಂಪಿ ಆಗಬೇಕಾದರೆ ನೂರಾರು ಕೋಟಿ ರೂಪಾಯಿ ಖರ್ಚು ಮಾಡಬೇಕು. ಗ್ರಾಮ ಪಂಚಾಯತ್ ಸದಸ್ಯ ಆಗಬೇಕೆಂದರೆ 2 -3 ಲಕ್ಷ ರೂಪಾಯಿ ಖರ್ಚು ಮಾಡಬೇಕು ಎಂದು ಕಿಡಿಕಾರಿದ್ದಾರೆ.
ಬಿಜೆಪಿ ರೈತರ ಬೆನ್ನಿಗೆ ಚೂರಿ ಹಾಕುತ್ತಿದೆ : ಹೆಚ್ಡಿಕೆ