ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ವಿಜಯಪುರ: ಆಡಳಿತಾರೂಢ ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಆಗಾಗ ಬೆಂಕಿಯ ಕೆಂಡ ಉಗುಳುವ ಮಾಜಿ ಸಚಿವ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಂಟಿ ಸಲಗ ಇದ್ದಂತೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಮೃತ್ಯುಂಜಯ ಸ್ವಾಮೀಜಿ ಹಾಡಿಹೊಗಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಶ್ರೀಗಳು, ಆನೆ ನಡೆದಿದ್ದೇ ದಾರಿ ಎಂಬಂತೆ, ಅದೇ ರೀತಿ ಗೌಡ್ರು ನಡೆದಿದ್ದೇ ದಾರಿ ಎಂದು ಬಣ್ಣಿಸಿದ್ದಾರೆ.
ಯತ್ನಾಳ್ ಬುಲೆಟ್ ಪಾಯಿಂಟ್ ಹಾಕ್ತಾ ಹೋದಂತೆ ಸರ್ಕಾರ ಸ್ಪಂದಿಸುತ್ತಲೇ ಹೋಗಿದೆ. ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಧ್ವನಿ ಎತ್ತಬೇಕಿದ್ದ ಶಾಸಕರು ಧ್ವನಿ ಎತ್ತಲಿಲ್ಲ. ಆದರೆ ಬಸನಗೌಡ ಪಾಟೀಲ್ ಯತ್ನಾಳ್ ಈ ಕೆಲಸ ಮಾಡಿದ್ದಾರೆ. ಇದು ಈ ನೆಲದ ಅಸ್ಮಿತೆ ಎಂದು ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ್ದಾರೆ.
ಯತ್ನಾಳ್ ಅವರ ಕ್ಷೇತ್ರಕ್ಕಾಗಿ ಮಾತ್ರ ಮಾತನಾಡಿಲ್ಲ. ಈ ಹಿಂದೆ ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆಯೂ ಅಂದಿನ ಪ್ರಧಾನಿ ವಾಜಪೇಯಿ ಅವರಿಗೂ ಮನವರಿಕೆ ಮಾಡಿದ್ದರು. ಯತ್ನಾಳ್ ಸ್ವಾರ್ಥಕ್ಕಾಗಿ ಎಂದೂ ಮಾತನಾಡಿಲ್ಲ ಎಂದು ಪಂಚಮಸಾಲಿ ಶ್ರೀಗಳು ಹೇಳಿದ್ದಾರೆ.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಯತ್ನಾಳ್ ಮಾತನಾಡುವುದನ್ನು ಕೇಳಿ ಮುಖ್ಯಮಂತ್ರಿ ಯಡಿಯೂರಪ್ಪ ಗರಂ ಆಗಿದ್ದಾರಂತೆ. ಯಡಿಯೂರಪ್ಪ ಹಾಗೂ ಯತ್ನಾಳ್ ನಡುವೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯ ಇಲ್ಲ. ಕೇವಲ ಆಡಳಿತಾತ್ಮಕ ಭಿನ್ನಾಭಿಪ್ರಾಯ ಅಷ್ಟೇ ಎಂದು ಜಯಮೃತ್ಯುಂಜಯ ಸ್ವಾಮೀಜಿ ಸಮರ್ಥನೆ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel