ಬಿಜೆಪಿ ಬಿಗ್ ಬಾಸ್ ಗಳಿಗೆ ನೋ ಎಂಟ್ರಿ : ಸಿಡಿದ ಖೂಬಾ
ಬೀದರ : ಬಿಜೆಪಿ ವಿರುದ್ಧ ಬಂಡಾಯವೆದ್ದು ಬಸವಕಲ್ಯಾಣ ಉಪಚುನಾವಣೆಯಲ್ಲಿ ಅಖಾಡಕ್ಕಿಳಿರುವ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಪಕ್ಷದ ಬಿಗ್ ಬಾಸ್ ಗಳಿಗೆ ಶಾಕ್ ನೀಡಿದ್ದಾರೆ.
ಬಿಜೆಪಿ ವರಿಷ್ಠರಿಗೆ ಪ್ರವೇಶವಿಲ್ಲ ಎಂದು ತಮ್ಮ ಮನೆಯ ಗೇಟಿಗೆ ಫಲಕ ಹಾಕಿದ್ದಾರೆ. ಅಲ್ಲದೆ ಯಾವುದೇ ಕಾರಣಕ್ಕೂ ಅಖಾಡದಿಂದ ಹಿಂದೆ ಸರಿಯಲ್ಲ ಎಂದು ಸಂದೇಶ ನೀಡಿದ್ದಾರೆ.
ಕ್ಷೇತ್ರದಲ್ಲಿದ್ದ 17 ಟಿಕೆಟ್ ಆಕಾಂಕ್ಷಿಗಳನ್ನು ಬದಿಗಿಟ್ಟು ಅನ್ಯ ಕ್ಷೇತ್ರದ ವ್ಯಕ್ತಿಗೆ ಮಣೆ ಹಾಕಿದ್ದಾರೆಂದು ಅಸಮಧಾನ ವ್ಯಕ್ತಪಡಿಸಿದ ಖೂಬಾ , ಬಿಜೆಪಿ ವಿರುದ್ಧ ಬಂಡಾಯ ಎದ್ದು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದ್ದಾರೆ.
ಈ ಹಿನ್ನೆಲೆ ಅವರ ಮನೆಗೆ ಬಿಜೆಪಿ ವರಿಷ್ಠ ಪದೇ ಪದೇ ಭೇಟಿ ನೀಡುತ್ತಿದ್ದಾರೆ.
ಈ ಕಾರಣಕ್ಕಾಗಿ ಬಿಜೆಪಿ ವರಿಷ್ಠರು ನಮ್ಮ ಮನೆಗೆ ಬರಬಾರದು ಎಂದು ಭಾರತೀಯ ಜನತಾ ಪಾರ್ಟಿ ವರಿಷ್ಠರಿಗೆ ಯಾರಿಗೂ ಪ್ರವೇಶವಿಲ್ಲ ಎಂಬ ಫಲಕವನ್ನ ತಮ್ಮ ಮನೆಯ ಗೇಟಿನ ಬಾಗಿಲಿಗೆ ಹಾಕಿದ್ದಾರೆ.