ಬಿಜೆಪಿಯಲ್ಲಿ ನನ್ನಷ್ಟು ಯೋಗ್ಯತೆ, ಅರ್ಹತೆ ಯಾರಿಗಿದೆ : ಯತ್ನಾಳ್
ಧಾರವಾಡ : ಬಿಜೆಪಿಯಲ್ಲಿ ನನ್ನಷ್ಟು ಯೋಗ್ಯತೆ, ಅರ್ಹತೆ ಯಾರಿಗಿದೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸಚಿವ ಸಂಪುಟ ಬಗ್ಗೆ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ನಾನು ವಾಜಪೇಯಿ ಆಡಳಿತದಲ್ಲಿ ಮಂತ್ರಿಯಾಗಿದ್ದೆ.
ಸಚಿವ ಸಂಪುಟದಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದಾಗಿ ವಾಜಪೇಯಿ ಪತ್ರ ಕೊಟ್ಟಿದ್ದರು. ಅಟಲ್ಜೀ ಹಸ್ತಾಂಕ್ಷರದಿಂದ ಪತ್ರ ಪಡೆದ ವ್ಯಕ್ತಿ ನಾನು.
ಆದರೆ ದುರ್ದೈವ ಅಂದ್ರೆ ರಾಜಕಾರಣದಲ್ಲಿ ನೇರ ಮಾತನಾಡಬಾರದು, ಚಮಚಾಗಿರಿ ಮಾಡಬೇಕು. ಅದನ್ನು ನಾನು ಮಾಡೋದಿಲ್ಲ ಎಂದು ಯತ್ನಾಳ್ ಹೇಳಿದರು.
ಇನ್ನು ಎಲ್ಲಾ ಸಮುದಾಯಗಳಿಗೆ ನ್ಯಾಯ ಕೊಟ್ಟರೇ ನಾನು ಕೂಡ ಸಚಿವ ಸಂಪುಟ ಸೇರುತ್ತೇನೆ ಎಂದು ಯತ್ನಾಳ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಯತ್ನಾಳ್, ಸದನದಲ್ಲಿ ಸಿದ್ದರಾಮಯ್ಯ ಎಂಟೆಂಟು ತಾಸು ಮಾತನಾಡುತ್ತಾರೆ. ಹಾಡಿದ್ದು ಹಾಡೋ ಕಿಸಬಾಯಿದಾಸ ಅಂತಾರಲ್ಲ, ಹಾಗೇ ಸಿದ್ದರಾಮಯ್ಯ ಹೇಳಿದ್ದೇ ಹೇಳುತ್ತಾರೆ ಎಂದು ಹೇಳಿದರು.