ಕಾಂಗ್ರೆಸ್ ಬಿಡುವವರ ಪಟ್ಟಿ ನನ್ನ ಬಳಿ ಇದೆ : ಯತ್ನಾಳ್ basavanagouda yatnal saaksha tv
ವಿಜಯಪುರ : ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಬಿಟ್ಟರೇ ಅಚ್ಚರಿ ಇಲ್ಲ ಎಂದು ಹೇಳಿದ್ದ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್, ಇಂದು ಹೊಸ ಬಾಂಬ್ ಸಿಡಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ಪಕ್ಷ ಬಿಡುವವರ ಪಟ್ಟಿ ನನ್ನ ಬಳಿಯಿದೆ.
ಹಾಗೆಯೇ ಬಿಜೆಪಿ ಬಿಡುವವರ ಲಿಸ್ಟ್ ಕೂಡ ನನ್ನ ಬಳಿಯಿದೆ. ಕಾಲಕಾಲಕ್ಕೆ ಹೇಳ್ತೀನಿ 6 ತಿಂಗಳು ತಡೆದು ಜಾದು ಹೇಗೆ ನಡೆಯುತ್ತೆ ನೋಡಿ ಎಂದು ತಮ್ಮದೇ ಶೈಲಿಯಲ್ಲಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಇನ್ನು ಸಿದ್ದರಾಮಯ್ಯರನ್ನು ಮುಗಿಸೋದೆ ಡಿಕೆಶಿ ಪಾದಯಾತ್ರೆ ಉದ್ದೇಶ. ಜನರಿಗಾಗಿ ಪಾದಯಾತ್ರೆ ಮಾಡಿಲ್ಲ.
ದೇಶ ಆಳಿದ ಕಾಂಗ್ರೆಸಿಗರು ಮೇಕೆದಾಟು, ಆಲಮಟ್ಟಿ ಹೋರಾಟ ಮಾಡಲಿಲ್ಲ. ಅಧಿಕಾರ ಅನುಭವಿಸಿ, ಲೂಟಿ ಮಾಡಿ ಮತ್ತೆ ಅಧಿಕಾರಕ್ಕಾಗಿ ಹೋರಾಟ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.