ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ – ಸರ್ಕಾರದ ಹಸ್ತಕ್ಷೇಪ ಇಲ್ಲ, ಪಾರದರ್ಶಕ ತನಿಖೆ
ಕೆ ಎಸ್ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿ ಸಂಪೂರ್ಣ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಕಂಡುಕೊಳ್ಳುತ್ತೇವೆ. ರಾಜ್ಯ ಸರ್ಕಾರ ಈ ಕೇಸ್ನಲ್ಲಿ ಯಾವುದೇ ಹಸ್ತಕ್ಷೇಪ ಮಾಡಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಂತೋಷ್ ಪಾಟೀಲ್ ಆತ್ಮಹತ್ಯೆ ಅವರು 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ನಲ್ಲಿ ದೇಹ ಪತ್ತೆ ಆಗಿದೆ. “ಈಗಾಗಲೇ ಸ್ಥಳಕ್ಕೆ ಉಡುಪಿ ಜಿಲ್ಲಾ ಎಸ್ಪಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಧಾವಿಸಿದ್ದು, ಎಲ್ಲ ರೀತಿಯ ಪ್ರಾಥಮಿಕ ತನಿಖೆಯಾಗುತ್ತಿದೆ. ಅಷ್ಟೆ ಅಲ್ಲದೇ ಕೂಡಲೇ ಮಂಗಳೂರಿನಿಂದ ಎಫ್ಎಸ್ಎಲ್ ಅಧಿಕಾರಿಗಳು ಹೋಗಲು ತಿಳಿಸಿದ್ದೇನೆ. ಈ ಎಲ್ಲ ಮಾಹಿತಿ ಕಲೆಹಾಕಿದ ಮೇಲೆ ಪ್ರಾಥಮಿಕ ವರದಿ ಬಂದ ನಂತರ ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ,” ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದರು.
ನ್ನೂ ರಾಜಿನಾಮೆ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಮಾತನಾಡಿ ಈ ಹಿಂದೆ ಒಬ್ಬ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು ಆಗ ಸಿದ್ದರಾಮಯ್ಯ ರಾಜಿನಾಮೆ ನೀಡಿದ್ದರಾ ಎಂದು ಪ್ರಶ್ನಿಸಿದರು.