ಕೊರೊನಾ ಎರಡನೇ ಅಲೆ ನಮ್ಮ ಔಷಧಿಯನ್ನು ಮೀರಿಸುವಂತಿದೆ : ಬಸವರಾಜ್ ಬೊಮ್ಮಾಯಿ
ಹಾವೇರಿ : ಕೊರೊನಾ ಎರಡನೇ ಅಲೆ ನಮ್ಮ ಔಷಧಿಯನ್ನು ಮೀರಿಸುವಂತಿದೆ. ಕೊರೊನಾ ಎರಡನೇ ಅಲೆ ನಮ್ಮ ಇಮ್ಯುನಿಟಿಯನ್ನು ಎದುರಿಸುವಷ್ಟು ಶಕ್ತಿ ಪಡೆದಿದೆ ಎಂದು ಸಚಿವ ಬಸವರಾಜ್ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆ ನಮ್ಮ ಔಷಧಿಯನ್ನು ಮೀರಿಸುವಂತಿದೆ. ಕೊರೊನಾ ಎರಡನೇ ಅಲೆ ನಮ್ಮ ಇಮ್ಯುನಿಟಿಯನ್ನು ಎದುರಿಸುವಷ್ಟು ಶಕ್ತಿ ಪಡೆದಿದೆ.
ಕೊರೊನಾ ಎರಡನೇ ಅಲೆ ಬಗ್ಗೆ ಜನರು ಹೊರಗಡೆ ಓಡಾಡೋವಾಗ ಗಂಭೀರವಾಗಿ ವಿಚಾರ ಮಾಡಬೇಕು. ಜನರು ಸಹ ಪ್ರಾರಂಭದಲ್ಲೇ ಇದಕ್ಕೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.
ಹೋಂ ಐಸೋಲೇಶನ್ ನಲ್ಲಿದ್ದವರು ಏನಾದರೂ ತೊಂದರೆ ಕಾಣಿಸಿಕೊಂಡರೆ ತಕ್ಷಣ ಚಿಕಿತ್ಸೆಗೆ ಒಳಗಾಗಬೇಕು ಎಂದು ಜನರಲ್ಲಿ ಮನವಿ ಮಾಡಿಕೊಂಡರು.
ಇನ್ನು ಜನರು ಹೊರಗಡೆ ಓಡಾಡುವಾಗ ಬಲಪ್ರಯೋಗ ಇಲ್ಲದೆ ನಿಯಂತ್ರಣ ಮಾಡಬೇಕು ಎಂಬ ಆದೇಶವಿದೆ. ಪೊಲೀಸ್ ಇಲಾಖೆ ಪರಿಸ್ಥಿತಿ ನಿಯಂತ್ರಣಕ್ಕೆ ಹರಸಾಹಸ ಮಾಡುತ್ತಿದೆ.
ಮೊದಲನೇ ಅಲೆಯ ಸಮಯದಲ್ಲಿ ಉಪಚಾರದಿಂದ ಸಾವಿನ ದವಡೆಗೆ ಹೋಗದಂತೆ ತಡೆಗಟ್ಟಲು ಸಾಧ್ಯವಿತ್ತು. ಎರಡನೆ ಅಲೆ ವೇಗವಾಗಿ ಹರಡುತ್ತಿದೆ. ಇದು ನಮ್ಮ ಔಷಧಿಯನ್ನು ಮೀರಿಸುವಂತಿದೆ ಎಂದು ಅಭಿಪ್ರಾಯಪಟ್ಟರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಗೆ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.