Basavaraja bommai | ಒಕ್ಕಲಿಗ ಸಿಎಂ ಚರ್ಚೆ : ಬೊಮ್ಮಾಯಿ ಹೇಳಿದ್ದೇನು..?
ಮಂಡ್ಯ: ಒಕ್ಕಲಿಗರು ನನಗೆ ಬೆಂಬಲ ನೀಡಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ರಾಜ್ಯದಲ್ಲಿ ಒಕ್ಕಲಿಗ ಸಿಎಂ ಚರ್ಚೆ ಹುಟ್ಟಿಹಾಕಿದೆ.
ಈ ಕುರಿತು ಮಂಡ್ಯದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈಗಾಗಲೇ ಆ ಕುರಿತು ಮಾತನಾಡಿದ್ದೇನೆ. ಮತ್ತೆ ಮತ್ತೆ ಅದರ ಬಗ್ಗೆ ಮಾತನಾಡುವುದು ಬೇಡ. ಅದು ಅವರ ಪಕ್ಷದ ಆಂತರಿಕ ವಿಚಾರ.
ಮುಖ್ಯಮಂತ್ರಿ ಆಗುವುದು ಜನ ತೀರ್ಮಾನ ಮಾಡ್ತಾರೆ. ಅವರವರೇ ತೀರ್ಮಾನ ಮಾಡುವುದಲ್ಲ.
ಸಿಎಂ ಕುರ್ಚಿಗಾಗಿ ಅವರಿಬ್ಬರ ಪೈಪೋಟಿ ಜಗಜ್ಜಾಹೀರಾಗಿದೆ. ಅದರ ಬಗ್ಗೆ ನಾವು ತಲೆಕೆಡಿಸಿಕೊಂಡಿಲ್ಲ.

ಹೆಚ್ ಡಿ ಕುಮಾರಸ್ವಾಮಿ ಮೊದಲನಿಂದಲೂ ಸಿಎಂ ಆಗಲು ಅವಕಾಶ ಕೊಡಿ ಅಂತಿದ್ದಾರೆ.
ಈಗ ಡಿ.ಕೆ ಶಿವಕುಮಾರ್ ಈ ಬಾರಿ ನನಗೆ ಅವಕಾಶ ನೀಡಿ ಅಂತಿದ್ದಾರೆ.
ಮತ್ತೊಬ್ಬರು ಇನ್ನೊಮ್ಮೆ ಸಿಎಂ ಆಗಲು ಅವಕಾಶ ಕೊಡಿ ಅಂತಿದ್ದಾರೆ. ಎಲ್ಲವನ್ನೂ ಜನ ಗಮನಿಸುತ್ತಿದ್ದಾರೆ.
ಅವರೇ ತೀರ್ಮಾನ ಮಾಡ್ತಾರೆ. ಅದಕ್ಕೂ ಮುನ್ನ ಈ ರೀತಿಯ ಪೈಪೋಟಿಯನ್ನ ಎಲ್ಲರೂ ಗಮನಿಸುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ ನಿಗಮ ಮಂಡಳಿಗಳ ಬಗ್ಗೆ ಮಾತನಾಡಿ, ಶೀಘ್ರದಲ್ಲೇ ದೆಹಲಿ ಭೇಟಿ ನೀಡಲಿದ್ದೇನೆ. ದೆಹಲಿ ಭೇಟಿ ನಂತರ ನಿಗಮ ಮಂಡಳಿ ನೇಮಕ ಮಾಡಲಾಗುವುದು ಎಂದು ಹೇಳಿದರು.








