ಹಾವೇರಿ: ಬಿಜೆಪಿ ಕಟ್ಟಿ ಬೆಳೆಸಿದವರಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪಾತ್ರ ಮುಂಚೂಣಿಯಲ್ಲಿದ್ದಾರೆ. ಶಿಸ್ತಿನ ಸಿಪಾಯಿ, ಅವರ ಜತೆ ನಾನು ಮಾತನಾಡುವೆ. ಬಿಜೆಪಿ ಟಿಕೆಟ್ ವರಿಷ್ಠರ ತೀರ್ಮಾನ, ಯಾರಿಗೂ ಮೋಸ ಮಾಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಎಲ್ಲರಿಗೂ ಗೌರವ ನೀಡುವ ಕಾರ್ಯ ಮಾಡುತ್ತಿದೆ. ನನ್ನ ಹೆಸರು ಪಾರ್ಲಿಮೆಂಟರಿ ಬೋರ್ಡ್ನಲ್ಲಿ ಕೂಡ ಫೈನಲ್ ಆಗಿರಲಿಲ್ಲ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬೇರೆಯವರಿಗೆ ಅವಕಾಶ ಕೊಡಿ ಎಂದಿದ್ದೆ. ಪಿಎಂ, ನಡ್ಡಾಜಿ, ಗೃಹ ಸಚಿವರು ತಿಳಿಸಿದ ನಂತರ ಈ ನಿರ್ಧಾರ ಮಾಡಬೇಕಾಯಿತು. ಅನಿವಾರ್ಯ ಇರುವ ಹಿನ್ನೆಲೆಯಲ್ಲಿ ನೀನು ಸ್ಪರ್ಧಿಸು ಎಂದು ಪ್ರಧಾನಿ, ವರಿಷ್ಠರು ಹೇಳಿದರು. ಹೀಗಾಗಿ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಎಲ್ಲಾ ತಾಲೂಕುಗಳ ಅಭಿವೃದ್ಧಿ ಜೊತೆ ಶಿಗ್ಗಾವಿ ಅಭಿವೃದ್ಧಿ ಮಾಡಲಾಗುತ್ತದೆ. ಈಶ್ವರಪ್ಪ ಮನವೊಲಿಸಲು ಪ್ರಯತ್ನಿಸಲಾಗುತ್ತದೆ ಎಂದು ಹೇಳಿದ್ದಾರೆ.