ಕೋವಿಡ್ ಟೆಸ್ಟ್ ಗೊಂದಲ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟನೆ ನೀಡಿದ್ದಾರೆ.. ಒಳಾಂಗಣ ಸಮಾರಂಭದಲ್ಲಿ ಭಾಗವಹಿಸುವವರು ಕೋವಿಡ್ ಟೆಸ್ಟ್ ಮಾಡಿಸಬೇಕು. ಆದರೆ ಹೊರಾಂಗಣ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಯಾವುದೇ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.. ನಾನೂ ಕೂಡ ಕೋವಿಡ್ ಟೆಸ್ಡ್ ಮಾಡಿಸ್ತೇನೆ ಸಚಿವರೂ ಕೂಡ ಕೋವಿಡ್ ಟೆಸ್ಟ್ ಮಾಡಿಸ್ತಾರೆ ಎಂದಿದ್ಧಾರೆ..
ಮೋದಿ ಭೇಟಿ ಹಿನ್ನೆಲೆ ನಕೊಮ್ಮಘಟ್ಟದಲ್ಲಿ ಸಿಎಂ ಸ್ಥಳ ಪರಿಶೀಲನೆ ನಡೆಸಿದ್ದಾರೆ.. ಪರಿಶೀಲನೆ ಬಳಿಕ ಸಿಎಂ ಪತ್ರಿಕಾಗೋಷ್ಟಿಯನ್ನೂ ನಡೆಸಿದ್ಧಾರೆ.. ಈ ವೇಳೆ ಸಚಿವ ಸೋಮಶೇಖರ್, ಸಚಿವ ಅಶ್ವತ್ಥ ನಾರಾಯಣ, ಸದಾನಂದ ಗೌಡ ಉಪಸ್ಥಿತರಿದ್ದರು..