ಬೆಂಗಳೂರು: ಇಷ್ಟು ದಿನ ಎಲ್ಲೇ ಕೊರೊನಾ ಪಾಸಿಟಿವ್ ಕೇಸ್ ಗಳು ಕಂಡುಬಂದರು ಅಲ್ಲಿ ಬಿಬಿಎಂಪಿ ಇಲಾಖೆಯ ವತಿಯಿಂದ ಸೀಲ್ ಡೌನ್ ಮಾಡಿ ಕಂಟೈನ್ ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗುತ್ತಿತ್ತು. ಆದರೆ ಇದರಿಂದಾಗಿ ಸೀಲ್ ಡೌನ್ ಮಾಡಲಾದ ಮನೆಮಂದಿಯನ್ನು ಸಮಾಜದಲ್ಲಿ ನೊಡುವ ರೀತಿಯೇ ಬದಲಾಗುತ್ತೆ ಅನ್ನುವುದು ಹಲವರ ಬೇಸರಕ್ಕೆ ಕಾರಣವಾಗಿದೆ. ಆದರೆ ಈ ಕ್ರಮವನ್ನು ಕೈ ಬಿಡುವ ಸುಳಿವನ್ನು ಸದ್ಯ ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ಅವರು ನೀಡಿದ್ದಾರೆ. ಬಿಬಿಎಂಪಿ ಕೌನ್ಸಿಲ್ ಸಭೆ ಬಳಿಕ ಮಂಜುನಾಥ್ ಪ್ರಸಾದ್ ಅವರು ಈ ಕುರಿತಾಗಿ ಮಾತನಾಡಿದ್ದು, ಸೀಲ್ ಡೌನ್ ಏರಿಯಾದ ಜನರು ಮುಜುಗರಕ್ಕೆ ಒಳಪಡುತ್ತಿರುವ ಹಿನ್ನಲೆ ನಮಗೆ ಹಲವಾರು ದೂರುಗಳು ಬಂದಿವೆ. ಮನೆಗಳ ಸೀಲ್ ಡೌನ್ ಮಾಡೋದು ಸರಿಯಿಲ್ಲ ಅಂತಾ ಜನ ಹೇಳಿದ್ದಾರೆ. ಹಾಗಾಗಿ ಈ ಮನವಿಯನ್ನ ನಾನು ರಾಜ್ಯ ಸರ್ಕಾರದ ಮುಂದೆ ಇಡುತ್ತೇನೆ. ರಾಜ್ಯ ಸರ್ಕಾರ ಯಾವ ತೀರ್ಮಾನ ಕೈಗೊಳ್ಳುತ್ತೋ ಕಾದು ನೋಡಬೇಕಿದೆ. ಸರ್ಕಾರದ ಆದೇಶದ ನಂತರ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ
ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನತೆ ಮತ್ತು ಆಟೋ ಚಾಲಕರು ಕಂಗಾಲಾಗಿದ್ದಾರೆ. ಈ ಗಂಭೀರ ವಿಚಾರ...








