BCCI | ಟಿ-20 ಸರಣಿಯಿಂದ ರಾಹುಲ್, ಅಕ್ಷರ್ ಪಟೇಲ್ ಔಟ್…! bcci-Rahul Akshar Patel out of T20 series
ಟೀಮ್ ಇಂಡಿಯಾದ ಉಪನಾಯಕ ಕೆ.ಎಲ್. ರಾಹುಲ್ ಮತ್ತು ಸ್ಪಿನ್ನರ್ ಅಕ್ಷರ್ ಪಟೇಲ್ ಅವರು ವೆಸ್ಟ್ ಇಂಡೀಸ್ ವಿರುದ್ದದ ಟಿ-20 ಸರಣಿಯಿಂದ ಹೊರಗುಳಿದಿದ್ದಾರೆ.
ಈಗಾಗಲೇ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿರುವ ರೋಹಿತ್ ಬಳಗ ಈಗ ಟಿ-20 ಸರಣಿಯತ್ತ ಚಿತ್ತವನ್ನು ನೆಟ್ಟಿದೆ.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ-20 ಸರಣಿ ಫೆಬ್ರವರಿ 16ರಿಂದ ಕೊಲ್ಕತ್ತಾದ ಈಡನ್ ಗಾರ್ಡನ್ ಅಂಗಣದಲ್ಲಿ ನಡೆಯಲಿದೆ. ಎರಡನೇ ಟಿ-20 ಪಂದ್ಯ ಫೆಬ್ರವರಿ 18 ಮತ್ತು ಮೂರನೇ ಟಿ-20 ಪಂದ್ಯ ಫೆಬ್ರವರಿ 20ರಂದು ನಡೆಯಲಿದೆ.

ಈ ನಡುವೆ, ಕೆ.ಎಲ್. ರಾಹುಲ್ 2ನೇ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುತ್ತಿರುವಾಗ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಹೀಗಾಗಿ ಮೂರನೇ ಏಕದಿನ ಪಂದ್ಯದಲ್ಲಿ ಆಡಿರಲಿಲ್ಲ. ಹಾಗೇ ವೈಯಕ್ತಿಕ ಕಾರಣಗಳಿಂದ ಮೊದಲ ಏಕದಿನ ಪಂದ್ಯವನ್ನು ಮಿಸ್ ಮಾಡಿಕೊಂಡಿದ್ದರು.
ಈ ನಡುವೆ, ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕವನ್ನು ಬಲಪಡಿಸುವ ನಿಟ್ಟಿನಲ್ಲಿ ಕೆ.ಎಲ್. ರಾಹುಲ್ ಅವರಿಗೆ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಲಾಗಿತ್ತು.
ಆದ್ರೆ ಟಿ-20 ಸರಣಿಗೆ ಗಾಯದಿಂದಾಗಿ ಆಡುತ್ತಿಲ್ಲ. ಇನ್ನೊಂದೆಡೆ ಅಕ್ಷರ್ ಪಟೇಲ್ ಅವರು ಕೊವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದು ಅವರು ಕೂಡ ಟಿ-20 ಸರಣಿಯಲ್ಲಿ ಆಡುತ್ತಿಲ್ಲ.
ಇಬ್ಬರು ಆಟಗಾರರು ಕೂಡ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಸೇರಿಕೊಂಡಿದ್ದಾರೆ. ಮುಂದಿನ ಶ್ರೀಲಂಕಾ ವಿರುದ್ದದ ಟೆಸ್ಟ್ ಸರಣಿ ಹಾಗೂ ಐಪಿಎಲ್ ಟೂರ್ನಿಯನ್ನು ಎದುರು ನೋಡುತ್ತಿದ್ದಾರೆ.








