ಬೆಂಗಳೂರು: ವ್ಯಕ್ತಿಯೊಬ್ಬನನ್ನು ಕಿ.ಮೀಟರ್ ಗಟ್ಟಲೇ ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಲಕ್ಕಸಂದ್ರದಲ್ಲಿ (Lakkasandra) ನಡೆದಿದೆ. ಜೈಪ್ರಕಾಶ್ ಅಲಿಯಾಸ್ ಅಪ್ಪಿ ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ಹಂತಕರು ಸುಮಾರು ಕಿಲೋಮೀಟರ್ ದೂರದಿಂದಲೇ ಅಟ್ಟಿಸಿಕೊಂಡು ಬಂದಿದ್ದಾರೆ. ಆಗ ಆತ ಲಕ್ಕಸಂದ್ರದ ಹೋಟೆಲ್ ಗೆ ನುಗ್ಗಿದ್ದಾನೆ. ಆಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ, ಪರಾರಿಯಾಗಿದ್ದಾರೆ.
ಹತ್ಯೆಯಾದ ಜೈಪ್ರಕಾಶ್ ಲಕ್ಕಸಂದ್ರ ಹನುಮ ಜಯಂತಿಯ ಅನ್ನದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಈ ಸಂದರ್ಭದಲ್ಲಿ ನಾಲ್ಕೈದು ಜನ ಆತನನ್ನು ಗಮನಿಸಿದ್ದು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಆಗ ಆತ ತಪ್ಪಿಸಿಕೊಂಡು ಓಡಲು ಮುಂದಾಗಿದ್ದಾನೆ. ಆದರೂ ಬಿಡದೆ ಹತ್ಯೆ ಮಾಡಿದ್ದಾರೆ.
ಹತ್ಯೆಯಾಗಿರುವ ಜೈಪ್ರಕಾಶ್ 2009ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.







