ಹನುಮಾನ್ ದೇವಾಲಯದ ಆವರಣದಲ್ಲಿ ಗೋಮಾಂಸ ಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಘಟನೆಯ ಹಿನ್ನೆಲೆಯಲ್ಲಿ ಯಾವುದೇ ಕೋಮ ಗಲಭೆ ಸಂಭವಿಸಬಾರದು ಎಂಬ ನಿಟ್ಟಿನಲ್ಲಿ ದೇವಸ್ಥಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿನ ಹಾಸ್ಪುರದ ಬಾಲಾಬಿಘಾದಲ್ಲಿನ ಹನುಮಾನ್ ದೇಗುಲದಲ್ಲಿ ಗೋಮಾಂಸ ಇರಿಸಿರುವುದನ್ನು ಕಂಡು ಪೊಲೀಸರು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಕೂಡಲೇ ಆಗಮಿಸಿದ ಪೊಲೀಸರು ಗೋ ಮಾಂಸ ತೆರವುಗೊಳಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪೊಲೀಸರು ಸ್ಥಳೀಯರೊಂದಿಗೆ ಸಭೆ ನಡೆಸಿ, ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ ಸಮಾಜಘಾತುಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ, ದೇವಸ್ಥಾನದ ಸುತ್ತ ಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.