Belagavi Rain | ಹೆಚ್ಚಿದ ಮಳೆ.. ಸೇತುವೆ ಜಲಾವೃತ.. ಸ್ಥಳಕ್ಕೆ ಡಿಸಿ ಭೇಟಿ
ಬೆಳಗಾವಿ : ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕಳೆದ 9 ದಿನಗಳಿಂದ ಎಡಬಿಡದೇ ಮಳೆಯಾಗುತ್ತಿದ್ದು, ಜಿಲ್ಲೆಯ ಸಪ್ತ ನದಿಗಳು ಮೈದುಂಬಿ ಹರಿಯುತ್ತಿವೆ.
ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 85 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಅಷ್ಟೇ ಪ್ರಮಾಣದ ನೀರನ್ನ ಹಿಪ್ಪರಗಿ ಬ್ಯಾರೇಜ್ ನಿಂದ ಹೊರ ಬಿಡಲಾಗುತ್ತಿದೆ.
ಇತ್ತ ಘಟಪ್ರಭಾ ನದಿಗೆ 27 ಸಾವಿರ ಕ್ಯೂಸೆಕ್, ಮಲಪ್ರಭಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಮಹಾರಾಷ್ಟ್ರ ಆಗಲೀ, ಬೆಳಗಾವಿ ಜಿಲ್ಲೆ ಜಲಾಶಯಗಳು ಇನ್ನೂ ಅರ್ಧದಷ್ಟು ಭರ್ತಿ ಆಗಿಲ್ಲ.
ಹೀಗಾಗಿ ಯಾವುದೇ ಜಲಾಶಯದಿಂದ ನೀರು ನದಿಗೆ ಬಿಡುತ್ತಿಲ್ಲ
ನೀರು ಹರಿಬಿಡುತ್ತಿರುವ ಕಾರಣ ನಿಪ್ಪಾಣಿ, ಚಿಕ್ಕೋಡಿ ತಾಲೂಕಿನ ಆರು ಕೆಳ ಹಂತದ ಸೇತುವೆ ಜಲಾವೃತವಾಗಿದ್ದು, ಸಂಚಾರ ಸ್ಥಗಿತಗೊಂಡಿದೆ.
ಹೀಗಾಗಿ ಸ್ಥಳಕ್ಕೆ ಬೆಳಗಾವಿ ಡಿಸಿ ನಿತೇಶ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಲ್ಲದೆ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.