ಅಭಿಮಾನಿಗಳ ಮುಂದೆ ಮಾದರಿಯಾಗಬೇಕಿದ್ದ ಚಂದನವನದ ಸೆಲೆಬ್ರಿಟಿಗಳು ಕೆಟ್ಟ ಉದಾಹರಣೆಯಾಗುತ್ತಿದ್ದಾರೆ. ನಿವೇದಿತಾ-ಚಂದನ್ ವಿಚ್ಛೇದನ, ಯುವ ರಾಜಕುಮಾರ್ ಹಾಗೂ ಶ್ರೀದೇವಿ ವಿಚ್ಛೇದನ ಪರಸ್ಪರ ಆರೋಪ-ಪ್ರತ್ಯಾರೋಪ. ನಂತರ ದರ್ಶನ್ ಪ್ರಕರಣ ಜನರು ಛೀ ಎನ್ನುವಂತಾಗಿದೆ. ಇದರ ಮಧ್ಯೆ ಮತ್ತೊಂದು ಪ್ರಕರಣ ಸದ್ದು ಮಾಡುತ್ತಿದೆ.
ಕೆಲವು ವರ್ಷಗಳ ಹಿಂದೆ ತಮಗೆ ಪತ್ನಿ ನಾಗರತ್ಯ ಅವರಿಂದ ವಿಚ್ಛೇದನ ಬೇಕೆಂದು ನಟ ವಿಜಯ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನ ಕೌಟುಂಬಿಕ ನ್ಯಾಯಾಲಯ ತಿರಸ್ಕರಿಸಿದೆ. ಅಲ್ಲದೇ, ವಿಚ್ಛೇದನ ನೀಡಲು ನಿರಾಕರಿಸಿದೆ.
ಹೀಗಾಗಿ ಪ್ರಕರಣದಲ್ಲಿ ದುನಿಯಾ ವಿಜಯ್ ಪತ್ನಿ ನಾಗರತ್ನಗೆ ಗೆಲುವಾಗಿದೆ. ಇದರ ಬೆನ್ನಲ್ಲಿಯೇ ನಾಗರತ್ನ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ.
ಇದು ನಾನು ನಂಬಿದ ದೇವರಿಂದ ಸಿಕ್ಕ ಗೆಲುವು, ನನ್ನ ನಂಬಿಕೆಗೆ ಸಿಕ್ಕ ಗೆಲುವು’ ಎಂದಿದ್ದಾರೆ. ‘ಸಮಸ್ತ ನಾಡಿನ ಜನತೆಗೆ ನನ್ನ ನಮಸ್ಕಾರ , ಈ ದಿನ ತುಂಬಾ ಖುಷಿ ಕೊಟ್ಟ ದಿನವಾಗಿದೆ. ನನ್ನ ಪತಿ ವಿಜಯ್ ತಮಗೆ ವಿಚ್ಛೇಧನ ಬೇಕೆಂದು ಸ್ವಲ್ಪ ವರ್ಷಗಳ ಹಿಂದೆ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆ ಹೋರಾಟದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ನನಗೆ ಜಯ ಸಿಕ್ಕಿದೆ, ನಾನು ನಂಬಿದ ದೇವರು ನನ್ನ ಕೈ ಬಿಡಲಿಲ್ಲ, ಇದು ನನ್ನ ಜಯ ಅನ್ನೋದಕ್ಕಿಂತ ನನ್ನ ಪತಿ ಅಧಿಕೃತವಾಗಿ ಇನ್ನೊಂದು ಮದುವೆಯಾಗಲು ಅವಕಾಶ ಸಿಕ್ಕಿಲ್ಲ ಅನ್ನೋ ನಿಜ!!! ಏಕೆಂದರೆ ನನಗೆ , ನನ್ನ ಅಪ್ಪ ಅಮ್ಮ ಮದುವೆ ಮಾಡಿಕೊಟ್ಟಾಗ ಹೇಳಿದ್ದು ಕಲಿಸಿದ್ದು ಒಂದೇ , ಗಂಡನೇ ದೇವರು, ಅತ್ತೆ ಮಾವನೇ ನಿಮ್ಮವರು, ಗಂಡನ ಮನೆಯೇ ನಿನ್ನ ಮನೆ, ಎಷ್ಟೇ ಕಷ್ಟಗಳು, ಏನೇ ಸಮಸ್ಯೆ ಬಂದರೂ ಅದೇ ಮನೆಯಲ್ಲೇ ಇರ್ಬೇಕು ಅವರೇ ನಿನಗೆ ಎಲ್ಲಾ ಎಂದಿದ್ದರು, ನಾನೂ ಅದನ್ನೇ ಪಾಲಿಸಿಕೊಂಡು ಬಂದವಳು!, ಅದನ್ನೇ ಪಾಲಿಸಿಕೊಂಡು ಹೋಗುವಳು , ನನಗೆ ನನ್ನ ಗಂಡ ಮಕ್ಕಳು ಇಷ್ಟೇ ಸರ್ವಸ್ವ! ನನ್ನ ಜೀವ ಇರುವವರೆಗೂ ಅವರ ಜೊತೆಯಲ್ಲೇ ಇದ್ದು ಸಾಯುತ್ತೇನೆ ಎಂದು ಹೇಳಿದ್ದಾರೆ.
ಕಾನೂನಿನ ಪ್ರಕಾರ ವಿಚ್ಚೇದನ ಆದ ನಂತರನೇ ಇನ್ನೊಂದು ಮದುವೆಗೆ ಅವಕಾಶ ಇರುವುದು ಎಂಬ ಸತ್ಯ ನಿಮಗೂ ಗೊತ್ತು. ನನ್ನ ಪತಿ ಇನ್ನೊಂದು ಮದುವೆಯಾಗಿಲ್ಲ ಎಂದು ಅವರೇ ನಮಗೆ ಹೇಳಿರುತ್ತಾರೆ. ದಯವಿಟ್ಟು ಬೇರೆ ವದಂತಿಗಳಿಗೆ ಕಿವಿಕೊಡದೆ, ನಿಮ್ಮ ಆಶೀರ್ವಾದ ಸದಾ ನಮ್ಮ ಕುಟುಂಬದ ಮೇಲೆ ಇರಲಿ ಎಂದು ಸಮಸ್ತ ನಾಡಿನ ಜನತೆಗೆ ಈ ಮೂಲಕ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.