ಬಳ್ಳಾರಿಯಲ್ಲಿ ಕಮರಿದ ಕಮಲ : ಕಾಂಗ್ರೆಸ್ ಗೆ ದಿಗ್ವಿಜಯ Congress
ಬಳ್ಳಾರಿ : ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದ್ದ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ದಿಗ್ವಿಜಯ ಸಾಧಿಸಿದೆ. 39 ವಾರ್ಡ್ ಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು 21 ಸ್ಥಾನ ಪಡೆದರೆ, ಬಿಜೆಪಿ 13 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡು ಮುಖಭಂಗ ಅನುಭವಿಸಿದೆ. ಇನ್ನುಳಿದಂತೆ 5 ಸ್ಥಾನಗಳು ಪಕ್ಷೇತರರ ಪಾಲಾಗಿವೆ.
ಅಚ್ಚರಿಯ ವಿಷಯ ಏನಂದ್ರೆ 18 ನೇ ವಾರ್ಡ್ ನಲ್ಲಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಪುತ್ರ ಶ್ರವಣಕುಮಾರ್ ರೆಡ್ಡಿಗೆ ಸೋಲಾಗಿದೆ. ಇದು ಬಿಜೆಪಿಗೆ ಭಾರಿ ಮುಜುಗರ ಉಂಟು ಮಾಡಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ನಂದೀಶ 128 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.
ಬಳ್ಳಾರಿ ಬಿಜೆಪಿಯ ಭದ್ರಕೋಟೆಗಳಲ್ಲಿ ಒಂದು. ಸಚಿವ ಶ್ರೀರಾಮುಲು ಸ್ವತಃ ರಸ್ತೆಗಿಳಿದು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದರು.