ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಳ್ಳಾರಿ ಜಿಲ್ಲೆ ಇಬ್ಭಾಗ ಪಕ್ಕಾ: ವಿಜಯನಗರ ಜಿಲ್ಲೆಗೆ ಬಿಎಸ್‍ವೈ ಗ್ರೀನ್ ಸಿಗ್ನಲ್..!

admin by admin
September 22, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬಳ್ಳಾರಿ ಜಿಲ್ಲೆ: ಬಳ್ಳಾರಿ, ಕುರುಗೋಡು, ಸಿರಗುಪ್ಪ, ಸಂಡೂರು, ಕೂಡ್ಲಿಗಿ
ವಿಜಯನಗರ ಜಿಲ್ಲೆ: ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ, ಹರಪನಹಳ್ಳಿ
ಬೆಂಗಳೂರು: ವಿವಾದಿತ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿ ವಿಜಯನಗರ ಜಿಲ್ಲೆ ರಚನೆಗೆ ಇಲ್ಲಿಯವರೆಗೆ ಎದುರಾಗಿದ್ದ ಅಡೆತಡೆಗಳು ದೂರವಾದ ಹಿನ್ನೆಲೆಯಲ್ಲಿ ನೂತನ ಜಿಲ್ಲೆ ರಚನೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗ್ರೀನ್ ಸಿಗ್ನಲ್ ನೀಡಿದ್ದಾರೆ.
11 ತಾಲೂಕುಗಳನ್ನು ಹೊಂದಿರುವ ಬಳ್ಳಾರಿ ಜಿಲ್ಲೆಯನ್ನು 5:6 ತಾಲೂಕುಗಳಾಗಿ ಹಂಚಿಕೆ ಮಾಡಿ ನೂತನ ವಿಜಯನಗರ ಜಿಲ್ಲೆ ಸ್ಥಾಪನೆ ಮಾಡುವುದು ತುಂಬಾ ಅಗತ್ಯವಿದೆ. ಹೀಗಾಗಿ ಮುಂದಿನ ಸಚಿವ ಸಂಪುಟ ಸಭೆಗೆ ಈ ವಿಷಯನ್ನು ಮಂಡಿಸಲು ಸೂಚಿಸಿ ಬಿಎಸ್‍ವೈ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಇಲ್ಲಿಯವರೆಗೆ ಬಳ್ಳಾರಿ ಜಿಲ್ಲೆ ವಿಭಜನೆಗೆ ಎದುರಾಗಿದ್ದ ಪರ-ವಿರೋಧಿ ಹೋರಾಟಗಳಿಗೆ ತಲೆ ಕೆಡಿಸಿಕೊಳ್ಳದೆ ಸಚಿವ ಆನಂದ್‍ಸಿಂಗ್ ಒತ್ತಡಕ್ಕೆ ಮುಖ್ಯಮಂತ್ರಿಗಳು ಮಣಿದಿದ್ದಾರೆ ಎಂಬುದಕ್ಕೆ ಈ ಟಿಪ್ಪಣಿಯೇ ಉತ್ತರ ನೀಡಿದೆ.


ಬಳ್ಳಾರಿ ಜಿಲ್ಲೆ ವಿಭಜನೆಗೆ ಬಿಜೆಪಿ ಶಾಸಕರೇ ಆದ ಸೋಮಶೇಖರ ರೆಡ್ಡಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಯವುದೇ ಕಾರಣಕ್ಕೂ ಜಿಲ್ಲೆ ವಿಭಜನೆ ಮಾಡಲು ಬಿಡುವುದಿಲ್ಲ ಎಂದು ಬಿಎಸ್‍ವೈ ಮುಂದೆಯೂ ತಮ್ಮ ಆಕ್ರೋಶ ಹೊರಹಾಕಿದ್ದರು.
ಆದರೆ, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ, ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಈ ಪ್ರಸ್ತಾಪ ಮೂಲೆ ಗುಂಪಾಗಿತ್ತು. ಆದರೆ, ಕೊರೊನಾ ನಡುವೆಯೇ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ನೂತನ ವಿಜಯನಗರ ಜಿಲ್ಲೆ ರಚನೆಗೆ ಪ್ರಕ್ರಿಯೆಗೆ ಮರುಜೀವ ಬಂದಿದೆ.
ಬಳ್ಳಾರಿ ಜಿಲ್ಲೆಯು ತುಂಬಾ ವಿಸ್ತಾರವಾಗಿದೆ. ಬಳ್ಳಾರಿ 11 ಕಂದಾಯ ತಾಲೂಕುಗಳನ್ನು ಹಾಗೂ 3 ಕಂದಾಯ ಉಪವಿಭಾಗಗಳನ್ನು ಒಳಗೊಂಡಿರುವ ಅತಿದೊಡ್ಡ ಜಿಲ್ಲೆ ಎನಿಸಿಕೊಂಡಿದೆ. ಕೆಲವೊಂದು ಪ್ರದೇಶಗಳು ಜಿಲ್ಲಾ ಕೇಂದ್ರದಿಂದ 200 ಕಿ.ಮೀ ದೂರದಲ್ಲಿವೆ. ಇದರಿಂದ ಈ ಭಾಗದ ರೈತರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಜನ ಸಾಮಾನ್ಯರಿಗೆ ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರ ತಲುಪುವುದು ತುಂಬಾ ದುಸ್ತರವಾಗಿದೆ.
ಸಾರ್ವಜನಿಕ ಹಾಗೂ ಆಡಳಿತ ಹಿತದೃಷ್ಟಿಯಿಂದ ಪ್ರಸ್ತುತ ಬಳ್ಳಾರಿ ಜಿಲ್ಲೆಯ 11 ತಾಲೂಕುಗಳಲ್ಲಿ ಮೂಲ ಬಳ್ಳಾರಿ ಜಿಲ್ಲೆಯಲ್ಲಿ ಐದು ತಾಲೂಕುಗಳನ್ನು(ಬಳ್ಳಾರಿ, ಕುರುಗೋಡು, ಸಿರಗುಪ್ಪ, ಸಂಡೂರು, ಕೂಡ್ಲಿಗಿ) ಉಳಿಸಿಕೊಂಡು, ಉಳಿದ 6 ತಾಲೂಕುಗಳನ್ನು (ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ, ಹರಪನಹಳ್ಳಿ) ಸೇರಿಸಿ ಹೊಸಪೇಟೆ ಪಟ್ಟಣವನ್ನು ಕೇಂದ್ರ ಸ್ಥಾನವನ್ನಾಗಿಸಿಕೊಂಡು ನೂತನ ವಿಜಯನಗರ ಜಿಲ್ಲೆ ರಚಿಸುವುದು ತುಂಬಾ ಅಗತ್ಯವಿರುತ್ತದೆ. ಈ ಹಿನ್ನೆಲೆಯಲ್ಲಿ ಈ ವಿಷಯವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಹೀಗಾಗಿ ನೂತನ ವಿಜಯನಗರ ಜಿಲ್ಲೆ ಸ್ಥಾಪನೆ ಕುರಿತ ವಿಚಾರ ಯಾವ ಸ್ವರೂಪ ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Related posts

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

July 10, 2026
ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

July 10, 2026

ಇನ್ನಷ್ಟು ಹೊಸ ಜಿಲ್ಲೆ ರಚನೆಗೆ ಹೋರಾಟ ಸಾಧ್ಯತೆ..!
ನೂತನ ವಿಜಯನಗರ ಜಿಲ್ಲೆ ರಚನೆಗೆ ಸರ್ಕಾರ ಕ್ಯಾಬಿನೆಟ್‍ನಲ್ಲಿ ಅನುಮೋದನೆ ನೀಡಿದರೆ ಈಗಾಗಲೇ ಹಲವು ದಶಕಗಳಿಂದ ಬೇಡಿಕೆಯಲ್ಲಿರುವ ಇತರೆ ಜಿಲ್ಲೆಗಳ ರಚನೆಯ ಬೇಡಿಕೆ ಮತ್ತೆ ಮುನ್ನೆಲೆಗೆ ಬರುವ ಸಾಧ್ಯತೆ ಇದೆ.
ವಿಶೇಷವಾಗಿ ಬೆಳಗಾವಿ ಜಿಲ್ಲೆಯನ್ನು ವಿಭಾಗಿಸಿ ಚಿಕ್ಕೋಡಿ ಜಿಲ್ಲೆ ರಚನೆ ಮಾಡಬೇಕೆಂಬ ಹೋರಾಟ ಕಳೆದ ವರ್ಷದ ತೀವ್ರ ಸ್ವರೂಪ ಪಡೆದಿತ್ತು. ಚಿಕ್ಕೋಡಿ ಜೊತೆಗೆ ಶಿರಸಿ, ಶಿಕಾರಿಪುರ ಸೇರಿದಂತೆ ಹಲವು ಜಿಲ್ಲೆಗಳ ಬೇಡಿಕೆಗಳು ಕೇಳಿ ಬಂದಿದ್ದವು. ಈ ಜಿಲ್ಲೆಗಳ ಬೇಡಿಕೆಗಳಿಗೆ ಸರ್ಕಾರಕ್ಕೆ ಬಿಸಿ ತುಪ್ಪವಾಗುವ ಸಾಧ್ಯತೆ ಇದೆ.

Tags: bellariBSYdivedigreen signalVijayanagar district
ShareTweetSendShare
Join us on:

Related Posts

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

by Shwetha
July 10, 2026
0

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಪರಿಶೀಲನೆ ನೆಪದಲ್ಲಿ ಕಾಲಹರಣ ಬೇಡ, ಸಾಲಮನ್ನಾ ಮಾಡಿ ರೈತರನ್ನು ಬದುಕಿಸಿ -ರೈತರ 50 ಸಾವಿರ ರೂಪಾಯಿ ವರೆಗಿನ ಸಾಲ ತಕ್ಷಣ ಮನ್ನಾ ಮಾಡಿ: ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ಒತ್ತಾಯ

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಮತ್ತು ಪ್ರವಾಹದಿಂದ ಕಂಗಾಲಾಗಿರುವ ರೈತರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಒತ್ತಾಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಂಕಷ್ಟದಲ್ಲಿರುವ ಅನ್ನದಾತರ...

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

by Shwetha
July 10, 2026
0

ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದ ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ (PG) ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆಗಳ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ....

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

by Shwetha
July 10, 2026
0

ಡೊನಾಲ್ಡ್ ಟ್ರಂಪ್ ಅವರು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ ನಡುವೆ ಇರಾನ್ ತನ್ನ ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಹೇಳಿದ್ದಾರೆ. ಇರಾನ್‌ಗೆ ನಾನೇ ನಂಬರ್-1 ಟಾರ್ಗೆಟ್. ಇರಾನ್ ನಾಯಕರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram