ಬಳ್ಳಾರಿ | ವಿನಾಯಿತಿ ಇಲ್ಲ.. ಹೆಲ್ಮೆಟ್ ಧರಿಸಲೇಬೇಕು : ಎಸ್ಪಿ ಸ್ಪಷ್ಟನೆ
ಬಳ್ಳಾರಿ : ಸಾರ್ವಜನಿಕರು ಯಾವುದೇ ಊಹಾಪೋಹದ ಸುದ್ದಿಗೆ ಕಿವಿಗೊಡಬಾರದು. ಜಿಲ್ಲೆಯಲ್ಲಿ ಹೆಲ್ಮೆಟ್ ಧರಿಸೋ ವಿಚಾರವಾಗಿ ಯಾವುದೇ ವಿನಾಯಿತಿ ನೀಡಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ ಅಡಾವತ್ ಸ್ಪಷ್ಟಪಡಿಸಿದ್ದಾರೆ.
ಬೇಸಿಗೆ ಆರಂಭವಾಗ ಹಿನ್ನೆಲೆ ವಿಧಾನ ಪರಿಷತ್ ನ ಸದಸ್ಯರೊಬ್ಬರು ಕಲಬುರಗಿ ವಿಭಾಗದ ಅವಳಿ ಜಿಲ್ಲೆಗಳಿಗೆ ಹೆಲ್ಮೆಟ್ ಧರಿಸೋದರಲ್ಲಿ ವಿನಾಯಿತಿ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ.
ಈ ವಿಚಾರವಾಗಿ ಎಸ್ ಪಿ ಕಚೇರಿಯಲ್ಲಿ ಮಾತನಾಡಿದ ಸೈದುಲ್ ಅಡಾವತ್ ಅವರು, ಬೇಸಿಗೆ ಆರಂಭವಾದ ಹಿನ್ನೆಲೆಯಲ್ಲಿ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಹೆಲ್ಮೆಟ್ ಧರಿಸೋದಕ್ಕೆ ಯಾವುದೇ ವಿನಾಯಿತಿ ನೀಡಿಲ್ಲ.
ಹೀಗಾಗಿ ಸಾರ್ವಜನಿಕರು ಯಾವುದೇ ಊಹಾಪೋಹದ ಸುದ್ದಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿಕೊಂಡರು.
ಇನ್ನು ಖಡ್ಡಾಯ ಹೆಲ್ಮೆಟ್ ಕೇಂದ್ರ ಸರ್ಕಾರದ ಆದೇಶವಾಗಿದೆ. ಹಾಗಾಗಿ ಹೆಲ್ಮೆಟ್ ಧರಿಸೋದಕ್ಕೆ ಯಾವುದೇ ವಿನಾಯಿತಿ ನೀಡಲ್ಲ, ನೀಡೋದೂ ಇಲ್ಲ.
ಕಡ್ಡಾಯವಾಗಿ ಹೆಲ್ಮೆಟ್ ಧರಿಸಲೇಬೇಕು. ಅದರಲ್ಲಿ ವಿನಾಯಿತಿ ನೀಡಲು ಬರುವುದಿಲ್ಲ ಎಂದು ಎಸ್ ಪಿ ಸೈದುಲ್ ಅಡಾವತ್ ತಿಳಿಸಿದ್ದಾರೆ.