“ಸಿಗಂದೂರು ಕ್ಷೇತ್ರವನ್ನ ಎದುರು ಹಾಕಿಕೊಂಡ್ರೆ ಬಿಎಸ್ ವೈ ನಾಶ”
ಶಿವಮೊಗ್ಗ : ಜಿಲ್ಲೆಯ ಶ್ರೀ ಕ್ಷೇತ್ರ ಸಿಗಂದೂರು ದೇವಾಲಯಕ್ಕೆ ಸಲಹಾ ಸಮಿತಿ ರಚನೆ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಪವಿತ್ರ ಧಾರ್ಮಿಕ ಕ್ಷೇತ್ರ ಸಿಗಂದೂರು ಕ್ಷೇತ್ರವನ್ನು ಎದುರು ಹಾಕಿಕೊಂಡರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಜೀವನ ನಾಶವಾಗಲಿದೆ ಎಂದು ಎಚ್ಚರಿಸಿದರು.
ಸರ್ಕಾರದ ಆಸ್ತಿ ಉಳಿಸಲು ವಿಫಲವಾದ ಅಧಿಕಾರಿಗಳು, ಖಾಸಗಿ ಟ್ರಸ್ಟ್ ಗೆ ಕೈ ಹಾಕಿದ್ದಾರೆ. ಬಿಜೆಪಿ ಮುಖಂಡರ ತಾಳಕ್ಕೆ ತಕ್ಕಂತೆ ಶಿವಮೊಗ್ಗ ಜಿಲ್ಲಾಧಿಕಾರಿ, ಎಸ್.ಪಿ ಕುಣಿಯುತ್ತಿದ್ದಾರೆ ಎಂದು ಆರೋಪಿಸಿದ ಗೋಪಾಲಕೃಷ್ಣ, ಸಿಗಂದೂರು ದೇಗುಲ ಮುಜರಾಯಿ ಇಲಾಖೆಗೆ ಸೇರಿಸಲು ಹೊರಟ ನಿಮ್ಮ ಉದ್ದೇಶವಾದರೂ ಏನು ಎಂದು ಬೇಳೂರು ಪ್ರಶ್ನಿಸಿದರು.
ಇದೇ ವೇಳೆ ಶಾಸಕ ಹರತಾಳು ಹಾಲಪ್ಪ ವಿರುದ್ಧ ಕಿಡಿಕಾರಿದ ಗೋಪಾಲಕೃಷ್ಣ, ಹರತಾಳು ಹಾಲಪ್ಪ, ಈಡಿಗರ ಜಾತಿಯನ್ನು ಒಡೆಯಲು ಹೊರಟಿದ್ದಾರೆ. ಗೋಕರ್ಣ, ರಾಮಚಂದ್ರಪುರ ಮಠ ಸೇರಿದಂತೆ ಅನೇಕ ದೇವಾಲಯಗಳಲ್ಲಿ ಗಲಾಟೆ ನಡೆದಿದೆ.
ಇದನ್ನೂ ಓದಿ : ಪಾಕಿಸ್ತಾನದ ಹೆಸರು ಹೇಳಲು ನಮಗೆ ನಾಚಿಕೆ : ಯು.ಟಿ.ಖಾದರ್
ಅವುಗಳನ್ನ್ಯಾಕೆ ಮುಜರಾಯಿಗೆ ಸೇರಿಸಲು ಮನಸ್ಸು ಮಾಡಿಲ್ಲ. ಸಿಗಂದೂರು ದೇವಾಲಯದಲ್ಲಿ ಗಲಾಟೆ ಮಾಡಿಕೊಂಡ ಧರ್ಮದರ್ಶಿ ಮತ್ತು ಅರ್ಚಕರನ್ನು ಕರೆದು, ಬುದ್ಧಿವಾದ ಹೇಳಿ ಕಳಿಸಬಹುದಿತ್ತು.
ಆದರೆ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಲಹಾ ಸಮಿತಿ ರಚಿಸಲಾಗಿದೆ. ಒಬ್ಬ ಜಿಲ್ಲಾಧಿಕಾರಿಯಾದವರು ರಾಜಕಾರಣಿಗಳ ಏಜೆಂಟ್ ರೀತಿ ವರ್ತಿಸಬಾರದು ಎಂದು ಗುಡುಗಿದ್ದಾರೆ.

ಇನ್ನು ಜಿಲ್ಲಾಧಿಕಾರಿಗಳು ಈಡಿಗ ಸಮಾಜಕ್ಕೆ ಸ್ವಯಂಘೋಷಿತ ಸಂಘಟನೆ ಅಂತಾ ಕರೆದಿದ್ದಾರೆ. ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ ಹೆಚ್ಚು ಈಡಿಗ ಸಮುದಾಯದವರಿದ್ದಾರೆ.
ಈ ಪದವನ್ನು ಕಡತದಿಂದ ತೆಗೆದು ಹಾಕಬೇಕು. ಸಿಗಂದೂರು ಕ್ಷೇತ್ರವನ್ನು ಎದುರು ಹಾಕಿಕೊಂಡರೆ, ರಾಜಕೀಯವಾಗಿ ಯಡಿಯೂರಪ್ಪ ನಾಶ ಹೊಂದಲಿದ್ದಾರೆ ಎಂದು ಶಾಪ ಹಾಕಿದರು.
ಇದನ್ನೂ ಓದಿ : ನಾನೇ ಬಿಜೆಪಿ ಅಭ್ಯರ್ಥಿ ಎಂದು ಭಾವಿಸಿ ಮತದಾನ ಮಾಡಿದ್ದೇನೆ : ಅಶೋಕ್
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channe









