Bengalore | ಸಚಿವರ ತರಾಟೆ : ರಾತ್ರೋ ರಾತ್ರಿ ರೆಡಿಯಾಯ್ತು ರಸ್ತೆ
ಬೆಂಗಳೂರು : ನಗರದ ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ರಸ್ತೆ ಉಬ್ಬನ್ನ ಹಾಕಲಾಗಿತ್ತು. Bengalore-Overnight Ready Road saaksha tv
ಈ ಬಗ್ಗೆ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಸೋಮವಾರ ಸಂಜೆ ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದ್ದರು.
ಇದರಿಂದ ಕೂಡಲೇ ಎಚ್ಚೆತ್ತುಕೊಂಡ ಬಿಬಿಎಂಪಿ ಸಿಬ್ಬಂದಿ, ಸೋಮವಾರ ರಾತ್ರಿಯೇ ಮಾರ್ಗೋಸಾ ರಸ್ತೆಯಲ್ಲಿ ನಿರ್ಮಿಸಿದ್ದ ರಸ್ತೆ ಉಬ್ಬನ್ನು ಸರಿಪಡಿಸಿದ್ದಾರೆ.
ವಾಹನ ಸವಾರರಿಗೆ ಇದು ಸ್ಪಷ್ಟವಾಗಿ ಕಾಣಿಸುವಂತೆ ಬಿಳಿ ಬಣ್ಣದ ಪಟ್ಟೆಗಳನ್ನು ಕೂಡ ಬಳಿದಿದ್ದಾರೆ.
ಜತೆಗೆ, ರಸ್ತೆ ಉಬ್ಬಿಗೂ ಸ್ವಲ್ಪ ಮೊದಲೇ ವಾಹನ ಸವಾರರು ತಮ್ಮ ವೇಗವನ್ನು ನಿಯಂತ್ರಿಸಲು ಅನುಕೂಲವಾಗುವಂತೆ ಈಗ ರಂಬ್ಲರ್ ಕೂಡ ಹಾಕಲಾಗಿದೆ.
ಜೊತೆಗೆ ಕ್ಷೇತ್ರದ ವ್ಯಾಪ್ತಿಗೆ ಬರುವ ರಾಮಮೋಹನಪುರ, ಮಹಾಕವಿ ಕುವೆಂಪು ರಸ್ತೆ, ಶ್ರೀರಾಂಪುರದ 3ನೇ ಮುಖ್ಯ ರಸ್ತೆ, ಗಾಯತ್ರೀನಗರ `ಡಿ’ ಬ್ಲಾಕ್, ರಾಜಾಜಿನಗರ 2ನೇ ಬ್ಲಾಕ್ ಮುಂತಾದ ಕಡೆಗಳಲ್ಲೂ ರಸ್ತೆ ಉಬ್ಬುಗಳಿಗೆ ಬಿಳಿ ಬಣ್ಣದ ಪಟ್ಟೆಗಳನ್ನು ಹಾಕಲಾಗಿದೆ.