Bengaluru : ಸಿಗರೇಟ್ ಸೇದುವ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ….
ಮೂವರು ಸ್ನೇಹಿತರ ನಡುವೆ ಸಿಗರೇಟ್ ವಿಚಾರಕ್ಕೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲಬುರ್ಗಿ ಮೂಲದ ಮಲ್ಲಿನಾಥ್ ಬಿರಾದಾರ್(36) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್ ಎಂಬ ವ್ಯಕ್ತಿ ಗಂಬೀರವಾಗಿ ಗಾಯಗೊಂಡಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉತ್ತರ ಕರ್ನಾಟಕ ಮೂಲದ ಮಲ್ಲಿನಾಥ್ ಬಿರಾದರ್, ಮಂಜುನಾಥ್ ಮತ್ತು ಚಿಕ್ಕಮಗಳೂರಿನ ಗಣೇಶ್ ಸ್ನೇಹಿತರಾಗಿದ್ದು ಮೆಜೆಸ್ಟಿಕ್ ಸುತ್ತಾಮುತ್ತ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಬಂದ ಹಣದಲ್ಲಿ ರಾತ್ರಿ ವೇಳೆ ಮದ್ಯ ಸೇವಿಸಿ ಮೆಜೆಸ್ಟಿಕ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಮಲಗುತ್ತಿದ್ದರು ಎನ್ನಲಾಗಿದೆ.
ಬುಧವಾರ ರಾತ್ರಿ ಮೂವರ ನಡುವೆ ಸಿಗರೇಟ್ ಸೇದುವ ವಿಚಾರಕ್ಕೆ ಜಗಳ ಉಂಟಾಗಿ ಮಂಜುನಾಥ್ ಮತ್ತು ಮಲ್ಲಿನಾಥ್ ಬಿರಾದರ್, ಆರೋಪಿ ಗಣೇಶ್ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ ಮೂವರು ಸಮಾಧಾನಗೊಂಡಿದ್ದರು. ಇಂದು ಸಂಜೆ ಮತ್ತೆ ಮೂವರು ಒಟ್ಟಿಗೆ ಮದ್ಯ ಸೇವಿಸಿದ್ದ ಸಮಯದಲ್ಲಿ ನಿನ್ನೆ ಘಟನೆಗೆ ಸಂಬಂಧಿಸಿ ದ್ವೇಷ ಸಾಧಿಸಿದ ಗಣೇಶ್ ತನ್ನ ಬಳಿಯಿದ್ದ ಚಾಕುವಿನಿಂದ ಮಂಜುನಾಥ್, ಮಲ್ಲಿನಾಥ್ನ ಹೊಟ್ಟೆಯ ಭಾಗಕ್ಕೆ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಲ್ಲಿನಾಥ್ ಬಿರಾದಾರ್ ಮೃತಪಟ್ಟಿದ್ದಾನೆ. ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Bengaluru: A fight over smoking cigarette ended in the murder of a friend….