Bengaluru – ಖಾಸಗಿ ಕಾಲೇಜಿನ ಪ್ರೊಫೆಸರ್ ಆತ್ಮಹತ್ಯೆಗೆ ಶರಣು…
ಖಾಸಗಿ ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಜ್ಞಾನಜ್ಯೋತಿ ನಗರದ ಕದಂಬ ಲೇಔಟ್ನಲ್ಲಿ ನಡೆದಿದೆ.
“ನನಗೆ ತೀವ್ರ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸಿಬಿಡಿ. ನನ್ನ ಸಾವಿಗೆ ನಾನೇ ಕಾರಣ” ಎಂದು ಡೆತ್ ನೋಟ್ ಬರೆದಿಟ್ಟು ಬಿಜಿಎಸ್ ಕಾಲೇಜಿನ ಪ್ರೊಫೆಸರ್ ಚೈತ್ರ (41) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನ್ನ ಪೊಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಚೈತ್ರಾ ಅವರು 23 ವರ್ಷದ ಹಿಂದೆ ಗುರುಪ್ರಸಾದ್ ಅವರನ್ನ ವಿಹಾವವಾಗಿದ್ದರು. ಚೈತ್ರಾ ಪತಿ ಸಿ.ಟಿ ಗುರುಪ್ರಸಾದ್ ಅವರು ಶಿಗ್ಗಾವಿಯಲ್ಲಿ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದಲ್ಲಿ ರಿಜಿಸ್ಟಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತಿ ಹಾವೇರಿಯಲ್ಲಿರಬೇಕಾದರೆ ಚೈತ್ರಾ ಅವರು ಕದಂಬ ಲೇಔಟ್ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಪತಿ ಎಂದಿನಂತೆ ಕರೆ ಮಾಡಿದಾಗ ಚೈತ್ರಾ ಅವರು ಕಾಲ್ ಸ್ವೀಕರಿಸಲಿಲ್ಲ. ಗುರುಪ್ರಸಾದ್ ಅವರು ಚೈತ್ರಾ ಸಹೋದರನಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮನೆಗೆ ಬಂದ ಚೈತ್ರಾ ಸಹೋದರ ಬಾಗಿಲು ಮುರಿದು ನೋಡಿದಾಗ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಚೈತ್ರಾ ಶವ ಪತ್ತೆಯಾಗಿದೆ.
ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.