Bengaluru: ಅನುಮಾನಾಸ್ಪದ ರೀತಿಯಲ್ಲಿ ಯುವಕ ಯವತಿಯ ಶವ ಪತ್ತೆ…
ಬೆಂಗಳೂರಿನ ನಗರದ ಮನೆಯೊಂದರಲ್ಲಿ ಯುವಕ ಯುವತಿ ಶವ ನೇಣುಬಿಗಿದ ರೀತಿಯಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಹೆಬ್ಬಗೋಡಿಯ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಪ್ರಕರಣ ವರದಿಯಾಗಿದೆ.
ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ಚೌಡ ಸಮುದ್ರದ ನಿವಾಸಿಗಳಾದ ಮಲ್ಲಿಕಾರ್ಜುನ್ (27), ನೇತ್ರಾವತಿ ಮೃತ ದುರ್ದೈವಿಗಳು. ಕಾಲೇಜು ದಿನಗಳಿಂದಲೇ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಖಾಸಗೀ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನೇತ್ರಾವತಿ ಹೆಬ್ಬಗೋಡಿ ಸಮೀಪದ ಮನೆಯಲ್ಲಿ ಬಾಡಿಗೆಗಿದ್ದರು. ಮಲ್ಲಿಕಾರ್ಜುನ್ ತನ್ನ ಊರಿನಲ್ಲೇ ಪೈಂಟಿಂಗ್ ಕೆಲಸ ಮಾಡುತ್ತಿದ್ದ. ಆಗಾಗ ನೇತ್ರಾವತಿಯನ್ನ ಭೇಟಿ ಮಾಡಲು ಮನೆಗೆ ಬರುತ್ತಿದ್ದ ಎನ್ನಲಾಗಿದೆ.
ಸಂಬಂಧವನ್ನ ಮುಂದುವರಿಸಲು ಇಷ್ಟಪಡದ ಕಾರಣ ಇಬ್ಬರೂ ಆಗಾಗ್ಗೆ ಜಗಳವಾಡುತ್ತಿದ್ದರು ಎನ್ನಲಾಗಿದೆ. ಇದೇ ತಿಂಗಳ 19 ರಂದು ಇಬ್ಬರ ಮಧ್ಯೆ ಜಗಳ ನಡೆದಿತ್ತು. ಜಗಳ ಸಾವಿನಲ್ಲಿ ಅಂತ್ಯವಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಮಲ್ಲಿಕಾರ್ಜುನ್ ಶವ ಪತ್ತೆಯಾಗಿದೆ. ನೇತ್ರಾವತಿ ವಾಂತಿ ಮಾಡಿಕೊಂಡು ನೆಲದ ಮೇಲೆ ಬಿದ್ದಿದ್ದಾಳೆ. ಹೆಬ್ಬಗೋಡಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.