Bengaluru Karaga : ಅದ್ಧೂರಿಯಾಗಿ ನೆರವೇರಿದ ಬೆಂಗಳೂರು ಕರಗ
ಕಳೆದ ಎರೆಡು ವರ್ಷಗಳಿಂದ ಮಹಾಮಾರಿ ಕೊರೊನಾ ಕಾರಣದಿಂದಾಗಿ ಕಳೆಗುಂದಿದ್ದ ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ನೆರವೇರಿದೆ..
ಬೆಂಗಳೂರು ಧರ್ಮರಾಯಸ್ವಾಮಿಯ ಐತಿಹಾಸಿಕ ದ್ರೌಪದಿ ಕರಗ ಉತ್ಸವ ಈ ವರ್ಷ ಅದ್ಧೂರಿಯಾಗಿ ನೆರವೇರಿದೆ. ಮಳೆಯ ಕಾರಣದಿಂದಾಗಿ ನಿಗದಿತ ಸಮಯಕ್ಕಿಂತ ಕೊಂಚ ತಡವಾಗಿ ಕರಗ ಉತ್ಸವವನ್ನು ಆರಂಭವಾಗಿತ್ತು..
JDS ಅಧ್ಯಕ್ಷರಾಗಿ ಸಿ.ಎಂ ಇಬ್ರಾಹಿಂ ಅಧಿಕಾರ ಸ್ವೀಕಾರ
2 ವರ್ಷಗಳ ಬಳಿಕ ನಡೆದ ಬೆಂಗಳೂರು ಕರಗ ಉತ್ಸವಕ್ಕೆ ಜನಸಾಗರವೇ ಹರಿದುಬಂದಿತ್ತು.. ಈ ಬಾರಿಯೂ ವೀರಕುಮಾರ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದ್ರು. ಮಳೆಯಿಂದಾಗಿ ತಡವಾಗಿ ಆರಂಭವಾದ ಕಾರಣ ಕರಗ ಮೆರವಣಿಗೆ ಬೆಳಗ್ಗಿನ ಜಾವದವರೆಗೂ ನಡೆಯಿತು. ಈ ವೇಳೆ ದುಂಡು ಮಲ್ಲಿಗೆ ಹೂವಿನಿಂದ ಅಲಂಕೃತಗೊಂಡಿದ್ದ ಆದಿಶಕ್ತಿ ಸ್ವರೂಪಿಣಿಯಾದ ದ್ರೌಪದಿಯನ್ನು ಭಕ್ತರು ಕಣ್ತುಂಬಿಕೊಂಡು ಪುನೀತರಾದರು.
ಮೆರವಣಿಗೆಯು ಕಬ್ಬನ್ ಪೇಟೆಯ ಗಲ್ಲಿಗಳು, ರಾಜ ಮಾರ್ಕೆಟ್, ಮಾರ್ಕೆಟ್ ಸರ್ಕಲ್, ಆಂಜನೇಯ ಸ್ವಾಮಿ ದೇವಸ್ಥಾನ, ಗಣೇಶ ದೇವಸ್ಥಾನ, ಕಾಟನ್ ಪೇಟೆ, ಮಸ್ತಾನ್ ಸಾಬ್ ದರ್ಗಾ, ಬಳೇ ಪೇಟೆ ಸರ್ಕಲ್, ಅಣ್ಣಮ್ಮ ದೇವಸ್ಥಾನ, ಕುಂಬಾರ ಪೇಟೆ, ಚೌಡೇಶ್ವರಿ ದೇವಸ್ಥಾನ, ತಿಗಳರ ಪೇಟೆ ಮೂಲಕ ದೇವಸ್ಥಾನಕ್ಕೆ ದ್ರೌಪದಿ ಕರಗ ವಾಪಸಾಯ್ತು.