ತಾಯಿಯ ಅನೈತಿಕ ಸಂಬಂಧದ ಬಗ್ಗೆ ತಂದೆಗೆ ತಿಳಿಸಿದಕ್ಕೆ ಮಕ್ಕಳ ಮೇಲೆ ಹಲ್ಲೆ..!
ಬೆಂಗಳೂರು: ತಮ್ಮ ಅನೈತಿಕ ಸಂಬಂಧದ ಬಗ್ಗೆ ಮಕ್ಕಳು ತಂದೆಗೆ ತಿಳಿಸಿದ ಕಾರಣಕ್ಕೆ ಸ್ವಂತ ತಾಯಿ ಹಾಗೂ ಆಕೆಯ ಪ್ರಿಯಕರ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಆರ್.ಆರ್ ನಗರ ವ್ಯಾಪ್ತಿಯಲ್ಲಿ ವರದಿಯಾಗಿದೆ.. ಪ್ರಕರಣ ಸಂಬಂಧ ಪೊಲೀಸರು ಆರೋಪಿ ತಾಯಿ ಹಾಗೂ ಆಕೆಯ ಪ್ರಿಕರನನ್ನ ಬಂಧಿಸಿದ್ದಾರೆ.
ಜಯಮ್ಮ(25) ಹಾಗೂ ಹೇಮಂತ್ (27) ಬಂಧಿತ ಆರೋಪಿಗಳಾಗಿದ್ದಾರೆ. ಅಂದ್ಹಾಗೆ ಆರೋಪಿ ಮಹಿಳೆಯ ಗಂಡ ಪ್ರಕರಣವೊಂದರಲ್ಲಿ ಬಂಧಿತನಾಗಿ ಜೈಲುಶಿಕ್ಷೆ ಅನುಭವಿಸುತ್ತಿದ್ದ. ಗಂಡನ ಬಂಧನದ ಬಳಿಕ ಹೇಮಂತ್ ಎಂಬಾತನ ಜೊತೆ ಜಯಮ್ಮ ಅಕ್ರಮ ಸಂಬಂಧ ಹೊಂದಿದ್ದಳು. ಜೈಲಿನಿಂದಲೇ ಮಕ್ಕಳಿಗೆ ಕರೆ ಮಾಡಿ ಮಾತನಾಡುತ್ತಿದ್ದ ತಂದೆಗೆ ಮಕ್ಕಳು ತಾಯಿಯ ಅಕ್ರಮ ಸಂಬಂಧದ ಬಗ್ಗೆ ತಿಳಿಸಿದ್ದಾರೆ. ಇದಾದ ನಂತರ ಪ್ರಿಯಕರನ ಜತೆ ಸೇರಿ ತನ್ನ ಸ್ವಂತ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾಳೆ. ಇದೀಗ ತಾನೂ ಕೂಡ ತನ್ನ ಪ್ರಿಯಕರನ ಜೊತೆ ಜೊತೆಗೆ ಜೈಲು ಸೇರಿದ್ದಾಳೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.