ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bengaluru : ಜೋರಾಯ್ತು ಮಡಿಕೇರಿಯಲ್ಲಿ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯ ಸ್ಥಾಪನೆಯ ಕೂಗು

Namratha Rao by Namratha Rao
March 20, 2022
in Newsbeat, State
Share on FacebookShare on TwitterShare on WhatsappShare on Telegram

Bengaluru : ಜೋರಾಯ್ತು ಮಡಿಕೇರಿಯಲ್ಲಿ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯ ಸ್ಥಾಪನೆಯ ಕೂಗು

-ಆಸ್ಪತ್ರೆ ಸ್ಥಾಪನೆಗೆ 1 ಕೋಟಿ ರೂಪಾಯಿ ಹಣ ಹಾಗೂ ಜಾಗ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರಬರೆದ ಸ್ಯಾನ್‌ ಎಂಡಿ ಡಾ. ವಿಶ್ವ ಕಾರ್ಯಪ್ಪ
-ಜನಾಂದೋಲನ ಕಾರ್ಯಕ್ರಮ ರೂಪಿಸಲು ಕ್ರಮ

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026
ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

June 25, 2026

ಬೆಂಗಳೂರು :  ಭಾರತದ ಸ್ವಿಟ್ಜರ್‌ಲ್ಯಾಂಡ್‌ ಎಂದೇ ಪ್ರಸಿದ್ದಿಯಾಗಿರುವ ಕೊಡಗು ಜಿಲ್ಲೆಯಲ್ಲಿ ಒಂದೂ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಗಳು ಇಲ್ಲ. ಇದರಿಂದ ಅಪಘಾತಗಳು ಹಾಗೂ ತೀವ್ರ ಅನಾರೋಗ್ಯದ ಸನ್ನಿವೇಶಗಳಲ್ಲಿ ಅಕ್ಕಪಕ್ಕದ ಜಿಲ್ಲೆಯ ಆಸ್ಪತ್ರೆಗಳಿಗೆ ರೋಗಿಗಳನ್ನು ಕೊಂಡೊಯ್ಯುವ ಅನಿವಾರ್ಯತೆ ಎದುರಾಗಿದೆ. ಇದಕ್ಕೆ ಪರಿಹಾರ ನೀಡಬೇಕು ಎನ್ನುವ ಉದ್ದೇಶದಿಂದ ಮಡಿಕೇರಿಯಲ್ಲಿ ರಾಜ್ಯ ಸರಕಾರದಿಂದ ಒಂದು ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಬೇಕು ಎನ್ನುವ ಕೂಗು ಈಗ ಮತ್ತಷ್ಟು ಜೋರಾಗಿದೆ.

ಭಾರತೀಯ ಸೇನೆಯಲ್ಲಿ ತಮ್ಮದೇ ಆದ ವಿಶಿಷ್ಟ ಛಾಪನ್ನು ಮೂಡಿಸಿರುವ ಕೊಡವರ ಜಿಲ್ಲೆಯಾದ್ಯಂತ ಯಾವುದೇ ಮಲ್ಟಿ ಅಥವಾ ಸೂಪರ್‌ ಸ್ಪೇಷಾಲಿಟಿ ಆಸ್ಪತ್ರೆ ಇಲ್ಲದೆ ತೀವ್ರ ತೊಂದರೆಯನ್ನು ಎದುರಿಸುತ್ತಿದ್ದಾರೆ. ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸರಕಾರದ ವತಿಯಿಂದ ಯಾವುದೇ ಮಲ್ಟಿ ಸ್ಪೇಷಾಲಿಟಿ ಅಥವಾ ಸೂಪರ್‌ ಸ್ಪೇಷಾಲಿಟಿ ಚಿಕಿತ್ಸೆಯನ್ನು ನೀಡುವ ಚಿಕಿತ್ಸಾ ಕೇಂದ್ರಗಳು ಇಲ್ಲ. ಗುಡ್ಡಗಾಡಿನಿಂದ ಕೂಡಿರುವ ಈ ಜಿಲ್ಲೆಯಲ್ಲಿ 2018 ರಲ್ಲಿ ಅಪ್ಪಳಿಸಿದ ಪ್ರವಾಹದಿಂದ ಲಕ್ಷಾಂತರ ಜನರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದಾರೆ. ರಾಜ್ಯದ ಪ್ರವಾಸೋದ್ಯಮದ ಕೇಂದ್ರಬಿಂದುವಾಗಿದ್ದ ಕೊಡಗು ಜಿಲ್ಲೆಯ ಆರ್ಥಿಕತೆಗೆ ಕರೋನಾ ದೊಡ್ಡ ಪೆಟ್ಟನ್ನೇ ನೀಡಿದೆ. ಈ ಆಘಾತಗಳಿಂದ ತೊಂದರೆಗೀಡಾಗಿರುವ ಜನರು ಅನಾರೋಗ್ಯದ ಚಿಕಿತ್ಸೆಗೂ ಬೇರೆ ಜಿಲ್ಲೆಗಳಿಗೆ ಎಡತಾಕಬೇಕಾಗಿದೆ.

ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಸರಕಾರದ ವತಿಯಿಂದ ಜಿಲ್ಲೆಯಲ್ಲಿ ಒಂದು ಮಲ್ಟಿಸ್ಪೇಷಾಲಿಟಿ ಅಥವಾ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿರುವ ಆಸ್ಪತ್ರೆಯನ್ನು ಸೂಪರ್‌ ಸ್ಪೇಷಾಲಿಟಿ ಚಿಕಿತ್ಸೆ ದೊರೆಯುವಂತೆ ಉನ್ನತೀಕರಿಸಬೇಕು ಎಂದು ಕೊಡಗಿನ ಉದ್ಯಮಿ ಸ್ಯಾನ್‌ ಗ್ರೂಪ್‌ ಆಫ್‌ ನ ವ್ಯವಸ್ಥಾಪಕ ನಿರ್ದೇಶಕ ಡಾ. ವಿಶ್ವ ಕಾರ್ಯಪ್ಪ ಬಿ.ಎಸ್‌ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ.

ಜಿಲ್ಲೆಯಲ್ಲಿ ಉತ್ತಮ ಆರೋಗ್ಯ ಸೌಲಭ್ಯಗಳಿಲ್ಲದೆ ಜಿಲ್ಲೆಯ ಬಡಜನರು ತೀವ್ರ ತೊಂದರೆಯನ್ನು ಎದುರಿಸುತ್ತಿದ್ದಾರೆ. ಇದರ ಬಗ್ಗೆ ರಾಜ್ಯ ಸರಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಜಿಲ್ಲೆಯಲ್ಲಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡುವಂತೆ ಪತ್ರದಲ್ಲಿ ನಾನು ಕೋರಿಕೆಯನ್ನು ಸಲ್ಲಿಸಿದ್ದೇನೆ. ಅಲ್ಲದೆ, ಮಲ್ಟಿ ಸ್ಪೇಷಾಲಿಟ ಆಸ್ಪತ್ರೆಯ ನಿರ್ಮಾಣಕ್ಕೆ ನನ್ನ ಸಂಸ್ಥೆಯ ವತಿಯಿಂದ 1 ಕೋಟಿ ರೂಪಾಯಿಗಳ ಹಣವನ್ನು ಹಾಗೂ ಅಗತ್ಯವಿರುವ ಜಾಗವನ್ನೂ ನೀಡಲು ಮುಂದಾಗಿದ್ದೇನೆ. ಈ ಬಗ್ಗೆ ಪ್ರಧಾನಿ ಕಾರ್ಯಾಲಯದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದ್ದು ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣವಾಗುವ ನಿಟ್ಟಿನಲ್ಲಿ ಸಕಾರಾತ್ಮಕ ಬೆಳವಣಿಗೆಯನ್ನು ನಿರೀಕ್ಷಿಸುತ್ತಿದ್ದೇನೆ. ಇಲ್ಲದಿದ್ದಲ್ಲಿ ಈ ಬಗ್ಗೆ ಮುಂದಿನ ದಿನಗಳಲ್ಲಿ ಜನಾಂದೋಲನ ರೂಪಿಸುವುದಾಗಿ ಎಂದು ಸ್ಯಾನ್‌ ಗ್ರೂಪ್‌ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ ವಿಶ್ವ ಕಾರ್ಯಪ್ಪ ತಿಳಿಸಿದರು.

Tags: #saakshatvbengaluruMadikerimultispeciality hospital
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

by Shwetha
June 25, 2026
0

ರಾಜ್ಯ ರಾಜಕಾರಣದಲ್ಲಿ ಬಿಡದಿ ಟೌನ್ ಶಿಪ್ ವಿವಾದ ಈಗ ತಾರಕಕ್ಕೇರಿದೆ. ರಾಜಕೀಯ ಕೆಸರೆರಚಾಟದ ನಡುವೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಎಂಟ್ರಿ ದೊಡ್ಡ ಸಂಚಲನ ಮೂಡಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram