ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ chikkamagalore
ಚಿಕ್ಕಮಗಳೂರು : ನಗರದ ಹೊರವಲಯದ ಕಲ್ಯಾಣನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ.
ಯುವಕರು, ಮಹಿಳೆಯರು ದೊಣ್ಣೆಯಿಂದ ಪರಸ್ಪರ ಮನಸ್ಸೋ ಇಚ್ಛೆ ಕೋಲಿನಿಂದ ಹೊಡೆದಾಡಿಕೊಂಡಿದ್ದಾರೆ.
ಗ್ರಾಮದ ನಡು ರಸ್ತೆಯಲ್ಲಿಯೇ ಹೊಡೆದಾಟ ನಡೆದಿದ್ದು, ಕಲ್ಲಿನಿಂದಲೂ ಹೊಡೆದಾಟ ನಡೆಸಲು ಮುಂದಾಗಿದ್ದಾರೆ.
ಸದ್ಯ ಗಾಯಾಳುಗಳನ್ನು ಜಿಲ್ಲಾಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲು ಆಗಿದೆ.