Bharat Jodo Yatra | ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಪ್ರವೇಶ
ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ಕರ್ನಾಟಕಕ್ಕೆ ಪ್ರವೇಶಿಸಲಿದೆ.
ಬೆಳಿಗ್ಗೆ 9 ಗಂಟೆಗೆ ಗುಂಡ್ಲುಪೇಟೆ ಮೂಲಕ ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಪ್ರವೇಶಿಸಲಿದೆ. ಆರಂಭಕ್ಕು ಮುನ್ನ ವೇದಿಕೆ ಕಾರ್ಯಕ್ರಮ ಇರಲಿದೆ.
ಮೊದಲ ದಿನ ರಾಹುಲ್ ಗಾಂಧಿ ಹಾಗು 120 ಪಾದಯಾತ್ರಿಗಳೊಂದಿಗೆ ರಾಷ್ಟ್ರ ಹಾಗು ರಾಜ್ಯ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಕೆ.ಎಚ್. ಮುನಿಯಪ್ಪ, ರೆಹಮಾನ್ ಖಾನ್ ಮೊದಲಾದವರು ಭಾಗಿಯಾಗಲಿದ್ದಾರೆ.
ಮೊದಲ ದಿನದ ಯಾತ್ರೆಯಲ್ಲಿ ಚಾಮರಾಜನಗರ, ಬೆಂಗಳೂರು ದಕ್ಷಿಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 30 ಸಾವಿರ ಕಾರ್ಯಕರ್ತರು ಹೆಜ್ಜೆ ಹಾಕಲಿದ್ದಾರೆ.
ಮಾರ್ಗ ಮಧ್ಯೆ ವೀರನಪುರ ಕ್ರಾಸ್ ಬಳಿ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿರುತ್ತದೆ.
ಊಟದ ನಂತರ ಬುಡಕಟ್ಟು ಜನಾಂಗ ಹಾಗೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬಗಳ ಜೊತೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ.
ಇದಾದ ಬಳಿಕ ಸಂಜೆ 4 ಗಂಟೆಗೆ ಯಾತ್ರೆ ಪುನರಾರಂಭವಾಗಲಿದೆ. ಸಂಜೆ 7 ಗಂಟೆಗೆ ಬೇಗೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.







