Bharat jodo yatra | ರಾಜ್ಯದಲ್ಲಿ “ರಾಹು”ಕಾಲ ಆರಂಭ : ಬಿಜೆಪಿ ವ್ಯಂಗ್ಯ
ಬೆಂಗಳೂರು : ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ರಾಜ್ಯಕ್ಕೆ ಪ್ರವೇಶಿಸಿದ್ದು, ರಾಜ್ಯ ಬಿಜೆಪಿ ಘಟಕ ವ್ಯಂಗ್ಯವಾಡಿದೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಬಿಜೆಪಿ, ಇಂದು ರಾಜ್ಯದಲ್ಲಿ ರಾಹುಕಾಲ ಆರಂಭದ ಸಮಯ ಬೆಳಿಗ್ಗೆ 10.30. ಆದುದರಿಂದ ದಿನನಿತ್ಯದ ನೆಮ್ಮದಿ ಮತ್ತು ಶಾಂತಿಗಾಗಿ ರಾಹು ಸಂಬಂಧಿತವಾದ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಳ್ಳುವಂತೆ ಜನಹಿತಕ್ಕಾಗಿ ಜಾರಿ.

ಜಾಮೀನಿನ ಆಧಾರದಲ್ಲಿ ಜೈಲಿನಿಂದ ಹೊರಗಿದ್ದುಕೊಂಡು ಭಾರತ್ ಜೋಡೋ ಯಾತ್ರೆ ಮಾಡುತ್ತಿರುವ ಭ್ರಷ್ಟ ಪರಿವಾರದ ನಕಲಿ ಗಾಂಧಿ ಕುಡಿ ರಾಹುಲ್ ಗಾಂಧಿ ಅವರಿಗೆ ಕರ್ನಾಟಕಕ್ಕೆ ಆತ್ಮೀಯ ಸ್ವಾಗತ.
ಭಯೋತ್ಪಾದಕರ ಬಗ್ಗೆ ಮೃದು ಧೊರಣೆ ಹೊಂದಿ, ದೇಶ ವಿಭಜಕರ ಜೊತೆ ಸಂಬಂಧ ಹೊಂದಿರುವ ರಾಹುಲ್ ಗಾಂಧಿ ಅವರಿಗೆ ಸ್ವಾಗತ.
ರಾಹುಲ್ ಗಾಂಧಿ ಮಾಡುತ್ತಿರುವುದು ಭಾರತ ಜೋಡೋ ಯಾತ್ರೆಯಲ್ಲ, ಎಐಸಿಸಿ ಮುಂದಿನ ಅಧ್ಯಕ್ಷ ಸ್ಥಾನವನ್ನು ನಕಲಿ ಗಾಂಧಿಗಳ ಕುಟುಂಬದಲ್ಲೇ ಇರಿಸಿಕೊಳ್ಳಲು ಮತ್ತು ನಿಯಂತ್ರಿಸಲು ನಡೆಸುತ್ತಿರುವ ಕಸರತ್ತು.
https://twitter.com/BJP4Karnataka/status/1575713795871485952?s=20&t=-LxNSJ0ZK3-I1m98wTy9FA
ಅಪರಾಧ ಸೂಚ್ಯಂಕ: (NCRB Report)
√ ತಮಿಳುನಾಡು – 422.1
√ ಕೇರಳ – 401.4
√ ರಾಜಸ್ಥಾನ – 269.6
√ ಕರ್ನಾಟಕ – 172.8
ಮಾನ್ಯ ರಾಹುಲ್ ಗಾಂಧಿ ಅವರೇ, ಅಪರಾಧ ಪ್ರಮಾಣ ಕಡಿಮೆ ಇರುವ ಕರ್ನಾಟಕಕ್ಕೆ ಸ್ವಾಗತ. ನಿಮ್ಮ ಶಾಂತಿಯ ಮಂತ್ರ ಕರುನಾಡಿಗೆ ಅಗತ್ಯವಿಲ್ಲ ಎಂದು ಬರೆದುಕೊಂಡಿದೆ.







