Bheemanaik
ಬಳ್ಳಾರಿ : ಪುರಸಬೆ ಚುನಾವಣೆ ವೇಳೆ ಶಾಸಕ ಭೀಮಾನಾಯ್ಕ್ ಅನುಚಿತ ವರ್ತನೆಯನ್ನು ಬಿಜೆಪಿ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಇಂದು ಹಗರಿಬೊಮ್ಮನಹಳ್ಳಿ ಬಂದ್ ಮಾಡಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿ ಭೀಮಾನಾಯ್ಕ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇನ್ನೂ ಹಗರಿಬೊಮ್ಮನಹಳ್ಳಿ ಬಂದ್ ಮಾಡಿ ಪಾದಯಾತ್ರೆಯ ಮೂಲಕ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಶಾಸಕ ಭೀಮಾನಾಯ್ಕ್ ಕ್ಷೇತ್ರದ ಜನರ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ. ಇದೇ ವೇಳೆ ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಶಾಸಕರ ದೌರ್ಜನ್ಯ ಮಿತಿಮೀರಿದೆ ಎಂದು ಆರೋಪಿಸಿರುವ ಬಿಜೆಪಿಯ ಮಾಜಿ ಶಾಸಕ ನೇಮಿರಾಜ್ ಅವರು, ಶಾಸಕರಾಗಿದ್ದುಕೊಂಡು ಜಗಳಕ್ಕೆ ಬಂದ ಭೀಮಾನಾಯ್ಕ್ ನಡೆಯನ್ನು ತೀವ್ರವಾಗಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಹಾರದ ಮುಂದಿನ ಸಿಎಂ ಯಾರಾಗ್ತಾರೆ : ಸುಶೀಲ್ ಮೋದಿ ಸ್ಪಷ್ಟನೆ..!
Bheemanaik
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel