ಮಧ್ಯಪ್ರದೇಶದ ಭೋಪಾಲ್ ನಲ್ಲಿ ಕೊರೊನಾ ಹಾವಳಿ ಹೆಚ್ಚಾದ ಪರಿಣಾಮ ಜುಲೈ 24ರಿಂದ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಜುಲೈ 24ರ ರಾತ್ರಿಯಿಂದಲೇ ಲಾಕ್ ಡೌನ್ ಅನ್ವಯಿಸಲಿದ್ದು, 10 ದಿನಗಳ ವರೆಗೂ ಜಾರಿಯಲ್ಲಿರುವಂತೆ ಮಧ್ಯಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ಕಳೆದ 24 ಗಂಟೆಗಳಲ್ಲಿ 157 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,669ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ಬಲಿಯಾದವರ ಸಂಖ್ಯೆ 144ರ ಗಡಿದಾಟಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಲಾಕ್ ಡೌನ್ ಅಸ್ತ್ರ ಪ್ರಯೋಗಿಸಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಅಗತ್ಯ ವಸ್ತುಗಳಾದ ಹಾಲು, ಹಣ್ಣು, ತರಕಾರಿ, ದಿನಸಿ, ಮೆಡಿಕಲ್ ಹೊರತಾಗಿ ಇನ್ನೆಲ್ಲಾ ಸೇವೆಗಳು ಸಂಪೂರ್ಣವಾಗಿ ಬಂದ್ ಆಗಿರಲಿದ್ದು, ನಾಗರಿಕರು ಈ ನಿಯಮಾವಳಿಗಳನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.
ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...







