12 ವರ್ಷಗಳ ನಂತರ ಏಕದಿನ ವಿಶ್ವಕಪ್ World Cup ಅನ್ನು ಭಾರತದಲ್ಲಿ ಆಯೋಜಿಸಲಾಗುತ್ತಿದ್ದು ಈ ಪಂದ್ಯಾವಳಿಯು ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ನಡೆಯಲಿದೆ. ಈ ಟೂರ್ನಿಗಾಗಿ ಬಿಸಿಸಿಐ ಕೂಡ ಭರ್ಜರಿ ತಯಾರಿ ನಡೆಸುತ್ತಿದೆ. ಈ ನಡುವೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ವಿಶ್ವಕಪ್ ವೇಳಾಪಟ್ಟಿ ಬದಲಾವಣೆ ಮಾಡಬೇಕು ಎಂಬ ಮನವಿಯನ್ನು ಐಸಿಸಿ ಮುಂದಿಟ್ಟಿದೆ.
ಆದರೆ ಇದೀಗ ಐಸಿಸಿ ಮತ್ತು ಬಿಸಿಸಿಐ ಪಾಕಿಸ್ತಾನಕ್ಕೆ ದೊಡ್ಡ ಹೊಡೆತ ನೀಡಿದೆ. ವಾಸ್ತವವಾಗಿ ವಿಶ್ವಕಪ್ನಲ್ಲಿ 2 ಪಂದ್ಯಗಳ ಸ್ಥಳವನ್ನು ಬದಲಾಯಿಸುವಂತೆ ಪಾಕಿಸ್ತಾನ ಮನವಿ ಮಾಡಿತ್ತು. ಆದರೆ ಐಸಿಸಿ ಈ ಮನವಿಯನ್ನು ತಿರಸ್ಕರಿಸಿದೆ. ಕ್ರಿಕ್ಬಜ್ ವರದಿಯ ಪ್ರಕಾರ, ಮಂಗಳವಾರ ನಡೆದ ಸಭೆಯ ನಂತರ ಬಿಸಿಸಿಐ ಮತ್ತು ಐಸಿಸಿ ಈ ನಿರ್ಧಾರವನ್ನು ತೆಗೆದುಕೊಂಡಿವೆ. ಈ ಬಗ್ಗೆ ಪಿಸಿಬಿಗೆ ಮಾಹಿತಿ ನೀಡಲಾಗಿದೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, ಅಫ್ಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ವಿರುದ್ಧದ ಪಂದ್ಯಗಳ ಸ್ಥಳವನ್ನು ಬದಲಾಯಿಸಲು ಪಿಸಿಬಿ ಮನವಿ ಮಾಡಿತ್ತು. ಅಫ್ಘಾನಿಸ್ತಾನ ವಿರುದ್ಧದ ಪಂದ್ಯ ಚೆನ್ನೈನಲ್ಲಿ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದ್ದು, ಈ ಎರಡೂ ಪಂದ್ಯಗಳು ನಡೆಯುವ ಸ್ಥಳಗಳು ನಮ್ಮ ತಂಡಕ್ಕೆ ಕಂಟಕವಾಗಿವೆ ಎಂಬುದು ಪಾಕ್ ವಾದವಾಗಿತ್ತು.
ಆದರೆ ಪಾಕ್ ವಾದವನ್ನು ನಯವಾಗಿ ತಿರಸ್ಕರಿಸಿರುವ ಐಸಿಸಿ ಪಂದ್ಯದ ಸ್ಥಳವನ್ನು ಬದಲಾಯಿಸುವುದಿಲ್ಲ ಎಂದು ಪಿಸಿಬಿಗೆ ಸಂದೇಶದ ಮೂಲಕ ತಿಳಿಸಿವೆ. ಪಂದ್ಯದ ಸ್ಥಳವನ್ನು ಬದಲಾಯಿಸಲು ಯಾವುದೇ ಘನ ಕಾರಣವಿಲ್ಲ. ಐಸಿಸಿ ಪಂದ್ಯಾವಳಿಗಳಲ್ಲಿ, ಭದ್ರತಾ ಕಾರಣಗಳಿಗಾಗಿ ಪಂದ್ಯದ ಸ್ಥಳವನ್ನು ಬದಲಾಯಿಸಬಹುದು. ಆದರೆ, ಪಿಸಿಬಿ ಮಾಡಿದ ಮನವಿಯಲ್ಲಿ ಯಾವುದೇ ನಿರ್ದಿಷ್ಟ ಕಾರಣವನ್ನು ನೀಡಲಾಗಿಲ್ಲ ಎಂದು ಐಸಿಸಿ ತನ್ನ ಸ್ಪಷ್ಟನೆಯಲ್ಲಿ ತಿಳಿಸಿದೆ.
ಈ ಹಿಂದೆ ಭದ್ರತಾ ದೃಷ್ಟಿಯಿಂದಾಗಿ ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯವನ್ನು ಧರ್ಮಶಾಲಾ ಬದಲಿಗೆ ಕೋಲ್ಕತ್ತಾದಲ್ಲಿ ನಡೆಸಲಾಗಿತ್ತು. ಆದರೆ ಚೆನ್ನೈ ಮತ್ತು ಬೆಂಗಳೂರು ಪಾಕಿಸ್ತಾನಕ್ಕೆ ಸುರಕ್ಷಿತ ಸ್ಥಳವೆಂದು ಪರಿಗಣಿಸಲಾಗಿದೆ. ಹೀಗಾಗಿ ಪಂದ್ಯ ನಡೆಯುವ ಸ್ಥಳಗಳಲ್ಲಿ ಬದಲಾವಣೆ ಇಲ್ಲ ಎಂದು ಐಸಿಸಿ ಹೇಳಿದೆ. ಇದರೊಂದಿಗೆ ಅಹಮದಾಬಾದ್ನಲ್ಲಿ ಟೀಂ ಇಂಡಿಯಾ ಎದುರು ಆಡುವ ಬಗ್ಗೆ ಪಿಸಿಬಿ ಮಾಜಿ ಅಧ್ಯಕ್ಷ ನಜೀಮ್ ಸೇಥಿ ಕಳವಳ ವ್ಯಕ್ತಪಡಿಸಿದ್ದರು. ಆದರೆ ಅದನ್ನೂ ಪರಿಗಣಿಸಿಲ್ಲ.
ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!
ಲಿಯೊನಾಲ್ ಮೆಸ್ಸಿ.. ಫುಟ್ಬಾಲ್ ಜಗತ್ತಿನ ಅಪ್ರತಿಮ ಹಾಗೂ ಸರ್ವಶ್ರೇಷ್ಠ ಆಟಗಾರ.. ಅರ್ಜೆಂಟಿನಾದ ದಂತಕಥೆ.. ವಿಶ್ವ ಫುಟ್ಬಾಲ್ ಕ್ಲಬ್ಗಳ ಸೂಪರ್ ಡೂಪರ್ ಪ್ಲೇಯರ್.. ಕೋಟ್ಯಂತರ ಅಭಿಮಾನಿಗಳ ಎವರ್ ಗ್ರೀನ್...








