ರಿಯಾಲಿಟಿ ಶೋ ‘ಬಿಗ್ಬಾಸ್’ ಕನ್ನಡ ನಡೆಯುತ್ತಿರುವ ಮಾಳಿಗೊಂಡನಹಳ್ಳಿ ಸರ್ವೆ ನಂ. 128/1ರ ವ್ಯಾಪಾರ ವಸತಿಯೇತರ ವ್ಯವಹಾರದ ಲೈಸೆನ್ಸ್ ರದ್ದು ಮಾಡಿದ್ದು, ಶೋ ಸ್ಥಗಿತಗೊಳಿಸಿ ಕ್ರಮಕೈಗೊಳ್ಳುವಂತೆ ಬೆಂ.ನಗರ ಜಿಪಂ CEO ಲತಾ ಕುಮಾರಿ ಸೂಚನೆ ನೀಡಿದ್ದಾರೆ. ಮಾಳಿಗೊಂಡನಹಳ್ಳಿಯಲ್ಲಿ ಬಿಗ್ಬಾಸ್ ಕಾರ್ಯಕ್ರಮವನ್ನು ಕಾನೂನು ಬಾಹಿರವಾಗಿ ನಡೆಸಲಾಗುತ್ತಿದೆ. ಸ್ಥಳೀಯ ಗ್ರಾಪಂ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿಲ್ಲ ಎಂದು ರಾಘವೇಂದ್ರ ಎಂಬುವರು ಡಿಸಿಗೆ ದೂರು ನೀಡಿದ್ದರು.ಹಿನ್ನೆಲೆ ಜಿಲ್ಲಾಧಿಕಾರಿಗಳು ಭೂಪರಿವರ್ತನೆ ಆದೇಶ ರದ್ದು ಮಾಡಿದ್ದಾರೆ.
ರಾಜ್ಯದ ದೊಡ್ಡ ರಿಯಾಲಿಟಿ ಶೋ ಅನ್ನು ಅನುಮತಿ ಇಲ್ಲದೆ ನಡೆಸುವುದು ತಪ್ಪು. ಎಲ್ಲರಿಗೂ ಒಂದೇ ಕಾನೂನು. ಈಗಾಗಲೇ ಎಲ್ಲಾ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಿದ್ದು, ಬಿಗ್ಬಾಸ್ ನಡೆಯುತ್ತಿರುವ ಜಾಗದ ಲೈಸೆನ್ಸ್, ಭೂಪರಿವರ್ತನೆ ಆದೇಶವನ್ನು ಸಹ ರದ್ದು ಮಾಡಲಾಗಿದೆ. ಬಿಗ್ ಬಾಸ್ ಶೋ ನಿಲ್ಲಿಸಲು ಸೂಚನೆ ಇದೆ. ನಿಲ್ಲಿಸದಿದ್ದರೆ ಹೋರಾಟ ಮಾಡಲಾಗುವುದು’ ಎಂದು ದೂರುದಾರ, ಪ್ರೆಸ್ ಕ್ಲಬ್ ಕೌನ್ಸಿಲ್ ರಾಜ್ಯಾಧ್ಯಕ್ಷ ರಾಘವೇಂದ್ರ ಆಚಾರ್ ತಿಳಿಸಿದ್ದಾರೆ.