ಬೆಂಗಳೂರು: ಧಾರವಾಹಿ ವೀಕ್ಷರಿಗೆ ಬಿಗ್ ಶಾಕ್. ಕೊರೊನಾ ವೈರಸ್ ಹರಡದಂತೆ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಕೊರೊನಾ ಎಂಬ ಮಹಾಮಾರಿ ಎಲ್ಲರಲ್ಲೂ ಆತಂಕ ಹೆಚ್ಚು ಮಾಡಿದೆ. ಈ ಹಿನ್ನೆಲೆಯಲ್ಲಿ ರಿಯಾಲಿಟಿ ಶೋಗಳು ಮತ್ತು ಧಾರಾವಾಹಿಗಳ ಚಿತ್ರೀಕರಣವನ್ನು ಮಾರ್ಚ್ 22ರಿಂದ 31ರವರೆಗೆ ಸ್ಥಗಿತಗೊಳಿಸಲು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ನಿರ್ಧರಿಸಿದೆ. ಈ ವಿಚಾರವಾಗಿ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಹಾಗೂ ಸಂಘ ಸಂಸ್ಥೆಗಳು ಇಂದು ಸಭೆ ಸೇರಿದ್ದವು. ಸಭೆಯಲ್ಲಿ ಚರ್ಚೆ ನಡೆಸಿ ರಿಯಾಲಿಟಿ ಶೋಗಳು ಮತ್ತು ಧಾರಾವಾಹಿಗಳ ಚಿತ್ರೀಕರಣವನ್ನು ಸ್ಥಗಿತಗೊಳಿಸಲು ತೀರ್ಮಾನ ಮಾಡಲಾಗಿದೆ. ಅಲ್ಲದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಂಡಿರುವ ಮುಂಜಾಗ್ರತಾ ಕ್ರಮಕ್ಕೆ ನಾವು ಬದ್ಧವಾಗಿದ್ದೇವೆ ಎಂದು ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ ಹೇಳಿದ್ದಾರೆ. ಮಾರ್ಚ್ 31ರ ನಂತರ ಅಂದಿನ ಸ್ಥಿತಿಗತಿ ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ಧಾರವಾಹಿಗಳು ಹಾಗೂ ರಿಯಾಲಿಟಿ ಶೋಗಳ ಚಿತ್ರೀಕರಣವನ್ನು ನಿಲ್ಲಿಸಲು ಅಸೋಸಿಯೇಷನ್ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!
ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...








