ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಯೋಗಿ ಆದಿತ್ಯನಾಥ್ ನಕಲಿ ಹಿಂದೂವೇ? ಶಂಕರಾಚಾರ್ಯರಿಂದ ಸಿಎಂಗೆ 40 ದಿನಗಳ ಅಗ್ನಿಪರೀಕ್ಷೆ!

Big shock for Yogi Adityanath: Fear of fake Hindu title, 40 days deadline!

Shwetha by Shwetha
February 2, 2026
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಜ್ಯೋತಿರ್ಮಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಅವರ ನಡುವಿನ ಸಂಘರ್ಷ ತಾರಕಕ್ಕೇರಿದೆ. ಹಿಂದೂ ಸಮಾಜದ ಪ್ರಬಲ ನಾಯಕರ ನಡುವಿನ ಈ ಜಟಾಪಟಿ ಈಗ ಸವಾಲು ಮತ್ತು ಗಡುವುಗಳ ಹಂತ ತಲುಪಿದ್ದು, ಯೋಗಿ ಆದಿತ್ಯನಾಥ್ ಅವರಿಗೆ ಸ್ವಾಮೀಜಿ ಕಠಿಣ ಪರೀಕ್ಷೆ ನೀಡಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹಿಂದೂತ್ವದ ಬದ್ಧತೆಯನ್ನು ಪ್ರಶ್ನಿಸಿರುವ ಶಂಕರಾಚಾರ್ಯರು, ತಮ್ಮ ಎರಡು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಕೇವಲ 40 ದಿನಗಳ ಕಾಲಾವಕಾಶ ನೀಡಿದ್ದಾರೆ. ಈ ಅವಧಿಯಲ್ಲಿ ಬೇಡಿಕೆ ಈಡೇರದಿದ್ದರೆ ಯೋಗಿಯವರನ್ನು ನಕಲಿ ಹಿಂದೂ ಎಂದು ಘೋಷಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Related posts

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

February 2, 2026
ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

February 2, 2026

ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಅವರು ಮುಖ್ಯಮಂತ್ರಿಗಳ ಮುಂದೆ ಇಟ್ಟಿರುವ ಬೇಡಿಕೆಗಳು ಸ್ಪಷ್ಟ ಮತ್ತು ನೇರವಾಗಿವೆ:

1. ಗೋವನ್ನು ರಾಜ್ಯ ಮಾತೆ ಎಂದು ಘೋಷಿಸಬೇಕು: ಮಹಾರಾಷ್ಟ್ರ ಸರ್ಕಾರ ಹಸುವನ್ನು ರಾಜ್ಯ ಮಾತೆ ಎಂದು ಘೋಷಿಸಿದ ಮಾದರಿಯಲ್ಲಿ ಮತ್ತು ನೇಪಾಳ ದೇಶ ಹಸುವಿಗೆ ರಾಷ್ಟ್ರೀಯ ಪ್ರಾಣಿ ಸ್ಥಾನಮಾನ ನೀಡಿದಂತೆ, ಉತ್ತರ ಪ್ರದೇಶದಲ್ಲೂ ಗೋವಿಗೆ ಅತ್ಯುನ್ನತ ಗೌರವ ಸಿಗಬೇಕು.

2. ಗೋಮಾಂಸ ರಫ್ತು ಸಂಪೂರ್ಣ ನಿಷೇಧ: ಮುಂದಿನ 40 ದಿನಗಳ ಒಳಗಾಗಿ ಉತ್ತರ ಪ್ರದೇಶದಿಂದ ನಡೆಯುತ್ತಿರುವ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಲ್ಲಿಸಬೇಕು.

ಮಾರ್ಚ್ 11ರಂದು ಲಕ್ನೋದಲ್ಲಿ ಮಹಾ ಪಂಚಾಯತ್!

ತಮ್ಮ ಬೇಡಿಕೆಗಳನ್ನು ಈಡೇರಿಸಲು ವಿಫಲವಾದರೆ ಆಗುವ ಪರಿಣಾಮಗಳ ಬಗ್ಗೆಯೂ ಸ್ವಾಮೀಜಿ ಎಚ್ಚರಿಸಿದ್ದಾರೆ. ಹಿಂದೂ ಧರ್ಮದ ಕುರಿತು ನಿಮ್ಮ ಬದ್ಧತೆಯನ್ನು ಸಾಬೀತು ಮಾಡಿ, 40 ದಿನಗಳ ಒಳಗಾಗಿ ಗೋ ಹತ್ಯೆಯನ್ನು ನಿಲ್ಲಿಸಿ. ಆಗ ಮಾತ್ರ ನೀವೊಬ್ಬ ಹಿಂದೂ ಅನುಯಾಯಿ ಎನ್ನುವುದನ್ನು ಒಪ್ಪಿಕೊಳ್ಳುತ್ತೇನೆ. ಒಂದು ವೇಳೆ ಈ ಸವಾಲನ್ನು ಸ್ವೀಕರಿಸಿ ಕಾರ್ಯರೂಪಕ್ಕೆ ತರಲು ವಿಫಲವಾದರೆ, ಮಾರ್ಚ್ 11ರಂದು ಲಕ್ನೋದ ವಿಧಾನ ಸಭೆಯ ಎದುರು ಸಾವಿರಾರು ಸಂತರನ್ನು ಒಗ್ಗೂಡಿಸಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ನಕಲಿ ಹಿಂದೂ ಎಂದು ಅಧಿಕೃತವಾಗಿ ಘೋಷಿಸಬೇಕಾಗುತ್ತದೆ ಎಂದು ಗುಡುಗಿದ್ದಾರೆ.

ಗೋವಿನ ಹೆಸರಿನಲ್ಲಿ ಎಮ್ಮೆ ಮಾಂಸ ರಫ್ತು ಆರೋಪ

ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿರುವ ಶಂಕರಾಚಾರ್ಯರು, ಉತ್ತರ ಪ್ರದೇಶ ರಾಜ್ಯವು ದೇಶದಲ್ಲಿಯೇ ಅತಿ ಹೆಚ್ಚು ಅಂದರೆ ಶೇ.40ರಷ್ಟು ಗೋಮಾಂಸವನ್ನು ರಫ್ತು ಮಾಡುತ್ತಿದೆ. ಕಡತಗಳಲ್ಲಿ ಎಮ್ಮೆಗಳ ಮಾಂಸ ಎಂದು ತೋರಿಸಿ ಗೋ ಮಾಂಸವನ್ನು ವಿದೇಶಗಳಿಗೆ ಕಳಿಸಲಾಗುತ್ತಿದೆ. ರಾಜ್ಯದಲ್ಲಿರುವ ಎಮ್ಮೆಗಳ ಸಂಖ್ಯೆಗೂ ಮತ್ತು ಅಲ್ಲಿಂದ ರಫ್ತಾಗುತ್ತಿರುವ ಮಾಂಸದ ಅಂಕಿ ಸಂಖ್ಯೆಗಳಿಗೂ ಯಾವುದೇ ತಾಳೆಯಾಗುತ್ತಿಲ್ಲ. ಹಸುವನ್ನು ಕೊಂದು ಗೋಮಾಂಸ ರಫ್ತು ಮಾಡಲಾಗುತ್ತಿದೆ ಎಂಬುದು ಸತ್ಯ ಎಂದು ಅಂಕಿಅಂಶಗಳ ಸಮೇತ ಆರೋಪಿಸಿದ್ದಾರೆ.

ಪ್ರಯಾಗ್ ರಾಜ್ ಘಟನೆಯೇ ಸಂಘರ್ಷಕ್ಕೆ ಮೂಲ?

ಈ ಇಬ್ಬರು ಪ್ರಮುಖರ ನಡುವಿನ ಶೀತಲ ಸಮರಕ್ಕೆ ಪ್ರಯಾಗ್ ರಾಜ್ ನಲ್ಲಿ ನಡೆದ ಮಾಘ ಮೇಳದ ಘಟನೆ ಕಾರಣ ಎನ್ನಲಾಗಿದೆ. ಮಾಘ ಮೇಳದಲ್ಲಿ ಪವಿತ್ರ ಸ್ನಾನ ಮಾಡಲು ತಮಗೆ ವಾಹನ ಸೌಕರ್ಯ ನೀಡದೆ ಕಾಲ್ನಡಿಗೆಯಲ್ಲಿ ತೆರಳುವಂತೆ ಮಾಡಲಾಯಿತು ಎಂದು ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನು ಖಂಡಿಸಿ ಶಂಕರಾಚಾರ್ಯ ಕ್ಯಾಂಪ್ ನಲ್ಲಿ ಜನವರಿ 18ರಿಂದ ಸತ್ಯಾಗ್ರಹ ಕೈಗೊಂಡಿದ್ದರೂ, ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ.

11 ದಿನಗಳ ಕಾಲ ಕಠಿಣ ಉಪವಾಸ ಮಾಡಿದರೂ ಯಾವ ಅಧಿಕಾರಿಯೂ ಪುಣ್ಯ ಸ್ನಾನ ಮಾಡುವಂತೆ ಬಂದು ಆಹ್ವಾನ ನೀಡಲಿಲ್ಲ. ಆಡಳಿತ ವ್ಯವಸ್ಥೆಯ ಈ ಧೋರಣೆಯಿಂದ ಬೇಸತ್ತು ಪ್ರತಿಭಟನೆ ಅಂತ್ಯಗೊಳಿಸಿ ಅವರು ಅಲ್ಲಿಂದ ನಿರ್ಗಮಿಸಿದ್ದರು. ಮುಂದಿನ ವರ್ಷ ಗೌರವಯುತವಾಗಿ ಆಹ್ವಾನಿಸಿದರೆ ಮಾತ್ರ ಮಾಘ ಮೇಳದಲ್ಲಿ ಪವಿತ್ರ ಸ್ನಾನ ಮಾಡುತ್ತೇನೆ ಎಂದು ಶಪಥ ಮಾಡಿದ್ದಾರೆ.

ನೀವೀಗ ಸಂತರಲ್ಲ, ಕೇವಲ ರಾಜಕಾರಣಿ!

ಈಗಾಗಲೇ ಯೋಗಿ ಆದಿತ್ಯನಾಥ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ಶಂಕರಾಚಾರ್ಯರು, ಯೋಗಿ ಆದಿತ್ಯನಾಥ್ ಈಗ ಸಂತರಲ್ಲ, ಅವರು ಕೇವಲ ಮುಖ್ಯಮಂತ್ರಿಗಳು. ಅವರು ರಾಜ್ಯದ ಶಿಕ್ಷಣ, ರಸ್ತೆ, ಮೂಲ ಸೌಕರ್ಯ ಅಭಿವೃದ್ಧಿ ಕುರಿತು ಆಲೋಚಿಸಲಿ. ಧರ್ಮದ ವಿಚಾರವನ್ನು ಸಾಧುಗಳಿಗೆ ಬಿಡಬೇಕು ಎಂದು ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದರು.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಧರ್ಮ ಮತ್ತು ರಾಜಕಾರಣದ ನಡುವಿನ ಈ ಸಂಘರ್ಷ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮಾರ್ಚ್ 11ರ ಒಳಗೆ ಯೋಗಿ ಸರ್ಕಾರ ಯಾವ ರೀತಿ ಪ್ರತಿಕ್ರಿಯಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ShareTweetSendShare
Join us on:

Related Posts

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್  ವಾಗ್ದಾಳಿ

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್ ವಾಗ್ದಾಳಿ

by Shwetha
February 2, 2026
0

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಸ್ಲಿಮ್ ಸಮುದಾಯದ ಮತಗಳನ್ನು ಪಡೆದು ಗೆದ್ದ ಶಾಸಕರು ಇದೀಗ ಅದೇ ಸಮುದಾಯವನ್ನು ಕಡೆಗಣಿಸುತ್ತಿದ್ದಾರೆ. ಕೋಮುವಾದಿ ವ್ಯಕ್ತಿಯೊಬ್ಬನನ್ನು ವೇದಿಕೆಯಲ್ಲಿ ಕೊಂಡಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ...

ಭಾರತದ ಬಜೆಟ್ ಮಂಡಿಸುವುದು ಅಮೆರಿಕದ ಅಧ್ಯಕ್ಷರೇ? ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಭಾರತದ ಬಜೆಟ್ ಮಂಡಿಸುವುದು ಅಮೆರಿಕದ ಅಧ್ಯಕ್ಷರೇ? ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
February 2, 2026
0

ಬೆಂಗಳೂರು: ಇರಾನ್ ಬದಲಿಗೆ ಭಾರತವು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಈಗ ಭಾರತೀಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram