ಸಚಿವರ ವಿರುದ್ಧದ ರೇಪ್ ಕೇಸ್ ಗೆ ಟ್ವಿಸ್ಟ್ : ಗಾಯಕಿ ವಿರುದ್ಧವೇ ಕೇಸ್ : ಸಚಿವರನ್ನು ಕೆಳಗಿಳಿಸುವ ಪ್ರಶ್ನೆಯೇ ಇಲ್ಲ ಎಂದ ‘ಮಹಾ’ ಸಿಎಂ..!
ಮುಂಬೈ: ಮಹಾರಾಷ್ಟ್ರದ ಕಾಂಗ್ರೆಸ್ ಸಚಿವ ಧನಂಜಯ್ ಮುಂಡೆ ಗಾಯಕಿಯ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿದ್ದು, ಸಚಿವ ಸ್ತಾನದಿಂದ ಅವರನ್ನ ಕೆಳಗಿಳುವಂತೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ. ಧನಂಜಯ್ ಮುಂಡೆ ಅವರ ವಿರುದ್ಧ ಗಾಯಕಿ ರೇಣು ಶರ್ಮಾ ದೂರು ದಾಖಲು ಮಾಡಿದ್ದರು. ಆದ್ರೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅತ್ಯಾಚಾರ ಆರೋಪ ಮಾಡಿರುವ ಗಾಯಕಿಯ ವಿರುದ್ಧವೇ ಕೇಸ್ ದಾಖಲು ಮಾಡಲಾಗಿದ್ದು, ಯಾವುದೇ ಕಾರಣಕ್ಕೂ ಧನಂಜಯ್ ಮುಂಡೆಯನ್ನ ಸಂಪುಟದಿಂದ ಕೈಬಿಡಲಾಗುವುದಿಲ್ಲ ಎಂದು ಸಿಎಂ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.
ಗಾಯಕಿ ಈ ಪ್ರಕರಣ ಸಂಬಂಧ ಮಹಾ ಸಿಎಂ ಹಾಗೂ ಪ್ರಧಾನ ಮಂತ್ರಿಗೂ ಪತ್ರ ಬರೆದು , ಜೀವ ಬೆದರಿಕೆ ಇರುವುದಾಗಿ ಹೇಳಿಕೊಂಡಿದ್ದರು. ಆದ್ರೆ ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಮುಂಡೆ , ಗಾಯಕಿ ಮಾಡಿರುವ ಅತ್ಯಾಚಾರ ಆರೋಪವನ್ನು ತಳ್ಳಿಹಾಕಿದ್ದರು. ಅಲ್ಲದೇ 2003ರವರೆಗೂ ನಾನು ಆ ಮಹಿಳೆಯೊಂದಿಗೆ ಸಂಪರ್ಕದಲ್ಲಿದ್ದೆ, ನಮಗೆ ಇಬ್ಬರು ಮಕ್ಕಳಿದ್ದಾರೆ. ಮನೆಯವರೂ ಕೂಡ ನಮ್ಮಿಬ್ಬರ ಸಂಬಂಧವನ್ನು ಒಪ್ಪಿಕೊಂಡಿದ್ದರು. ಇದೀಗ ಅಕ್ಕ-ತಂಗಿ ಸೇರಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ಗಾಯಕಿ ವಿರುದ್ಧ ಖುದ್ದು ಮುಂಡೆ ಅವರೇ ದೂರು ದಾಖಲು ಮಾಡಿದ್ದಾರೆ. ಅಲ್ಲದೇ ಧನಂಜಯ್ ರನ್ನ ಮಂತ್ರಿ ಸ್ಥಾನದಿಂದ ಕೆಳಗಿಳಿಸದೇ ಇರಲು ಮೈತ್ರಿ ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಕ್ರೈಂ ವೆಬ್ ಸಿರೀಸ್ ನಿಂದ ಮಕ್ಕಳನ್ನ ದೂರವಿಡಿ : ಯಾಕಂತ ಈ ಸ್ಟೋರಿ ನೋಡಿ…!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel