BIGGBOSS 8 : ಮನೆಯ ಸದಸ್ಯರನ್ನು ಪ್ರಾಣಿಗಳಿಗೆ ಹೋಲಿಸಿ ಅಭಿಪ್ರಾಯ ಹೊರಹಾಕಿದ ಚಕ್ರವರ್ತಿ
ಕಳೆದ ವಾರದ ಮಧ್ಯದಲ್ಲಿಯೇ ಎಲಿಮಿನೇಟ್ ಆಗಿದ್ದ ಚಂದ್ರಚೂಡ್ ಚಕ್ರವರ್ತಿ ಯಾರಿಗೂ ಸರಿಯಾಗಿ ವಿದಾಯ ಹೇಳುವುದಕ್ಕೂ ಆಗದೇ ಇರುವಂತಹಯ ಪರಿಸ್ಥಿತಿಯಲ್ಲಿ ಮನೆಯಿಂದ ಹೊರನಡೆದಿದ್ದರು.. ಆದ್ರೆ ವಾರದ ಕಥೆ ಕಿಚ್ಚ ಜೊತೆ ಎಪಿಸೋಡ್ಗೆ ಚಕ್ರವರ್ತಿ ಚಂದ್ರಚೂಡ್ ಆಗಮಿಸಿ ಹಲವಾರು ವಿಚಾರಗಳ ಕುರಿತಾಗಿ ಮಾತನಾಡಿದ್ದಾರೆ..
ದಿವ್ಯಾ ಉರುಡುಗ ಅವರ ಬಗ್ಗೆ ಮಾತನಾಡಿರೋ ಚಕ್ರವರ್ತಿ ಅವರನ್ನ ಕಾಂಗರೂ ಮರಿಗೆ ಹೋಲಿಸಿದ್ದಾರೆ. ನೀರಿದ್ದಾಗ ಹೇಗೆ ಮಾಡಬೇಕು, ನೀರಿಲ್ಲದಾಗ ಹೇಗೆ ಮಾಡಬೇಕು, ಹೇಗೆ ತನ್ನವರನ್ನು ಕಾಪಾಡಿಕೊಳ್ಳಬೇಕು ಎಂಬ ಗುಣವಿದೆ. ಆದರೆ ಅದಕ್ಕೆ ಬೆನ್ನ ಹಿಂದೆ ಯಾರಾದರೂ ಇರಲೇಬೇಕು ಎಂದಿದ್ದಾರೆ.
ಶಮಂತ್ ಕುರಿತಾಗಿ ಮಾತನಾಡಿ ಊರ ನಾಯಿ, ಕಾಡು ನಾಯಿ ಜೊತೆ ಹೋಗಿ ಬಿಟ್ಟಿದೆ. ನಾಯಿಗಳು ಎಂದೂ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ, ಹೇಗಾದರೂ ಮಾಡಿ ಬದುಕುತ್ತವೆ. ಇದನ್ನು ತುಂಬಾ ಜನ ಪೆಟ್ ಎಂದು ಮುದ್ದು ಮಾಡಿ, ಪ್ಯಾಂಟ್, ಶರ್ಟ್ ಹೊಲಿಸುತ್ತಾರೆ. ಆದರೆ ಇಂತಹ ನಾಯಿ ಯಾವಾಗಲೂ ಒಬ್ಬರ ಮೇಲೆ ಅವಲಂಬಿತವಾಗಿರಬೇಕು, ಇಲ್ಲವಾದಲ್ಲಿ ಅದಕ್ಕೆ ಬದುಕಲು ಆಗುವುದಿಲ್ಲ ಎಂದು ಶಮಂತ್ಗೆ ಹೇಳಿದ್ದಾರೆ.
ಇನ್ನೂ ಪ್ರಶಾಂತ್ ಸಂಬರಗಿಯನ್ನ ನರಿಗೆ ಹೋಲಿಸಿರುವ ಚಕ್ರವರ್ತಿ , ಅಲ್ಲಿ ಒಂದು ನರಿ ಇದೆ, ಇನ್ನೊಬ್ಬರ ತಪ್ಪುಗಳ ಮೇಲೆ ಸವಾರಿ ಮಾಡುತ್ತದೆ. ತನ್ನ ಸರಿಗಳ ಮೇಲೆ ಸವಾರಿ ಮಾಡಲ್ಲ. ಆದರೆ ಅದು ತುಂಬಾ ಬ್ರಿಲಿಯಂಟ್, ಜನರ ನಾಡಿ ಮಿಡಿತ ನೋಡಿಕೊಂಡು ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಆಟವಾಡುತ್ತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಅಲ್ಲಿ ತುಂಬಾ ಅದ್ಭುತವಾದ ಹುಲಿಯೊಂದಿದೆ. ಆ ಹುಲಿ ಯಾವಾಗಲೂ ಫ್ರಿಡ್ಜ್ ಇಟ್ಟುಕೊಳ್ಳುವುದಿಲ್ಲ, ಹೊಟ್ಟೆ ಹಸಿವಾದಾಗ ಮಾತ್ರ ಬೇಟೆಯಾಡುತ್ತದೆ. ಬಾಕಿ ವಿಚಾರಗಳಲ್ಲಿ ತುಂಬಾ ಆರಾಮವಾಗಿರುತ್ತದೆ. ಅದಕ್ಕೆ ಬೇರೆನೂ ಗೊತ್ತಾಗಲ್ಲ ಅದೇ ಕೆಪಿ ಅರವಿಂದ್ ಎಂದು ಹೇಳಿದ್ದಾರೆ. ಆದರೆ ಆ ಹುಲಿ ಈ ಕೊನೇಯ ವಾರದಲ್ಲಿ ಸರ್ವೈವ್ ಆಗಬೇಕೆಂದರೆ ನನ್ನ ಬೇಟೆಯಲ್ಲಿ ತಪ್ಪಿದೆ, ಒನ್ ಸೈಡೆಡ್ ಆಗುತ್ತಿದೆ ಎನ್ನುವುದು ಅದಕ್ಕೆ ಅರಿವಾಗಬೇಕು ಎಂದು ಅರ್ಥವಾಗಬೇಕಿದೆ ಎಂದಿದ್ದಾರೆ.
ದಿವ್ಯಾ ಸುರೇಶ್ ಬಗ್ಗೆ ಮಾತನಾಡಿ ಒಂದು ಜಿಂಕೆ ಇದೆ ಅದಕ್ಕೆ ಅಲಂಕಾರವೇ ಒಳ್ಳೆಯ ಗುಣ, ವಿನಯ ಸೆಕೆಂಡ್ ಇನ್ನಿಂಗ್ಸ್ನಲ್ಲಿ ತುಂಬಾ ಅಮಾಯಕ ಎಂದು ಅನ್ನಿಸಿದ್ದು ದಿವ್ಯಾ ಸುರೇಶ್. ಎಷ್ಟೇ ಬೇಟೆಗಾರರು ಬಂದರೂ ತನ್ನನ್ನು ತಾನು ರಕ್ಷಿಸಿಕೊಳ್ಳುವ ಸಾಮಥ್ರ್ಯವಿದೆ. ಆದರೆ ಆ ಜಿಂಕೆಗೆ ಸೋಲು ಗೆಲವು ಎರಡನ್ನೂ ಸಮಾನವಾಗಿ ತೆಗೆದುಕೊಳ್ಳುವ ಶಕ್ತಿ ಬೇಕು ಎಂದಿದ್ದಾರೆ.
ಇನ್ನೂ ಶುಭಾ ಪುಂಜಾ ಅವರನ್ನ ಮೊಲಕ್ಕೆ ಹೋಲಿಸಿ ಒಂದು ಮೊಲ ಇದೆ ಅದಕ್ಕೆ ವಯಸ್ಸು, ಆಯಸ್ಸು ಯಾವುದೂ ಗೊತ್ತಾಗಲ್ಲ, ಯಾವಾಗಲೂ ಏನಾದರೂ ಕೇಳುತ್ತಲೇ ಇರುತ್ತದೆ. ಅದನ್ನು ತಬ್ಬಿಕೊಂಡು ಮುದ್ದಾಡಬೇಕೆನ್ನಿಸುತ್ತದೆ. ಆದರೆ ಅದು ಯಾರಿಗೆ ವಾಸನೆ ಹಿಡಿದಿರುತ್ತದೆಯೋ ಅವರ ಜೊತೆ ಮಾತ್ರ ಇರುತ್ತದೆ ಎಂದು ಶುಭಾ ಪೂಂಜಾ ಬಗ್ಗೆ ಹೇಳಿದ್ದಾರೆ.
ವೈಷ್ಣವಿಯನ್ನ ಸಾರಂಗಕ್ಕೆ ಹೋಲಿಸಿ , ಅದು ನೋಡಕ್ಕೂ ಚೆಂದ, ವಾದ್ಯವಾಗುತ್ತದೆ. ಮಾತು ಕಡಿಮೆ ಆಡುತ್ತದೆ. ತನ್ನ ಪಾಡಿಗೆ ತಾನು ಹೋಗುತ್ತಿರುತ್ತದೆ. ಯಾವುದೇ ಪ್ರಭೇದ ಅಲ್ಲ. ಆದರೆ ಅದು ಸೌಂಡ್ ಮಾಡಲ್ಲ, ಅದು ಸದ್ದು ಮಾಡಿದರೆ ಸಾರಂಗಗಳು ಹಿಂಡಾಗಿ ಬರುತ್ತವೆ ಅವರೇ ವೈಷ್ಣವಿ ಎಂದಿದ್ದಾರೆ. ತುಂಬಾ ಚೆಂದದ ಸಾರಂಗ, ಮಾಡುವ ಕಡೆ ಶಬ್ದ ಮಾಡಬೇಕು. ಆಗ ಅದ್ಭುತವಾಗಿ ಕಾಣುತ್ತದೆ ಎಂದು ಅಭಿಪ್ರಾಯ ತಿಳಿಸಿದ್ದಾರೆ.
ಮಂಜು ಪಾವಗಡ ಅವರನ್ನ ಮುದ್ದು ಕೋಣಕ್ಕೆ ಹೋಲಿಸಿ ಕೆಸರಲ್ಲಿ, ನದಿಯಲ್ಲಿ ಎಲ್ಲಾದರೂ ಹಾಕಿ, ಏನೂ ಹಾಕಿದರೂ ನಗಿಸುವುದೊಂದೇ ಅದರ ಗುಣ. ಏನು ಮಾಡಿದರೂ ನಿನ್ನ ಜೊತೆ ಚೆನ್ನಾಗಿರುತ್ತೇನೆ ಎನ್ನುತ್ತಿರುತ್ತದೆ. ಹಳ್ಳಿ ಹಕ್ಕಿ, ಪ್ರತಿಭಾವಂತ ಅದು ಮಂಜು ಪಾವಗಡ ಅದಕ್ಕೊಂದು ಚೆಪ್ಪಾಳೆ ಎಂದಿದ್ದಾರೆ.
ಒಟ್ಟಾರೆ ನೇರ ನಡೆ ನುಡಿ , ಭಾಷೆಯ ಮೇಲಿನ ಹಿಡಿತದಿಂದ ಗುರುತಿಸಿಕೊಂಡಿದ್ದ ಚಕ್ರವರ್ತಿ ಅವರು ಆಗಾಗ ಈ ರೀತಿಯಾದ ಹೇಳಿಕೆಗಳಿಂದ ತಮ್ಮ ಪ್ರಬುದ್ಧತೆಯಿಂದ ಮೆಚ್ಚುಗೆ ಗಳಿಸಿದ್ದು, ಅವರು ಪ್ರಿಯಾಂಕಾ ತಿಮ್ಮೇಶ್ ಅವರ ವಿಚಾರದಲ್ಲಿ ಆ ಒಂದು ತಪ್ಪು ಮಾಡದೇ ಇದ್ದಿದ್ರೆ ಬಹುಶಃ ಅವರು ಇನ್ನೂ ಸ್ವಲ್ಪ ದಿನಗಳ ಕಾಲ ಮನೆಯಲ್ಲಿ ಉಳಿದುಕೊಂಡಿರುತ್ತಿದ್ದರು.
BIGGBOSS 8 : ಗ್ರ್ಯಾಂಡ್ ಫಿನಾಲೆಗೆ ವಾರ ಇರುವಾಗ್ಲೇ ಮನೆಯಿಂದ ಹೊರನಡೆದ ಶುಭಾ..!