BIGGBOSS 8 : ಕೊರೊನಾ ಲಾಕ್ ಡೌನ್ – ಅರ್ಧಕ್ಕೆ ನಿಂತ ಬಿಗ್ ಬಾಸ್..!
ಕನ್ನಡ ಕಿರುತೆರೆ ಪ್ರೇಕ್ಷಕರ ಫೇವರೇಟ್ ರಿಯಾಲಿಟಿ ಶೋ ಆಗಿರುವ ಇನ್ನೂ ಚಾಲ್ತಿಯಲ್ಲಿರುವ ಬಿಗ್ ಬಾಸ್ ಕನ್ನಡ ಸೀಸನ್ 8 ಅರ್ಧಕ್ಕೆ ಮುಕ್ತಾಯಗೊಳ್ಳಲಿದೆ. ನಾಳೆಗೆ ಅಂತ್ಯವಾಗಲಿದೆ. ಈ ವಿಚಾರವನ್ನು ಬಿಗ್ ಬಾಸ್ ಪ್ರಸಾರವಾಗುವ ಕಲರ್ಸ್ ಕನ್ನಡ ಚಾನೆಲ್ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಖಚಿತಪಡಿಸಿದ್ದಾರೆ. ತಮ್ಮ ಫೇಸ್ಬುಕ್ನಲ್ಲಿ ಈ ವಿಷಯ ಹಂಚಿಕೊಂಡಿರುವ ಅವರು ಯಾಕೆ ಈ ಶೋವನ್ನು ಅರ್ಧದಲ್ಲೇ ನಿಲ್ಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಕೊರೊನಾ ಹಾವಳಿ ಹಿನ್ನೆಲೆ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿರುವ ಪರಿಣಾಮವಾಗಿ ಎಲ್ಲಾ ರಿಯಾಲಿಟಿ ಶೋಗಳು ಸಹ ಬಂದ್ ಆಗಲಿವೆ.. ಹೀಗಾಗಿ ಬಿಗ್ ಬಾಸ್ ಸೀಸನ್ 8 ಅನ್ನು ಕೂಡ ಅರ್ಧಕ್ಕೆ ನಿಲ್ಲಿಸಲಾಗುತ್ತಿದ್ದು, ಪ್ರೇಕ್ಷಕರು ಬೇಜಾರಾಗಿದ್ದಾರೆ.
ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಪರಮೇಶ್ವರ್ ಗುಂಡ್ಕಲ್ ಅವರು ‘ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು ನೋಡಿದಾಗ ಒಂದಕ್ಕಿಂತ ಹೆಚ್ಚು ಭಾವನೆಗಳು ಒಂದೇ ಸಲಕ್ಕೆ ಬಂದು ಮನಸ್ಸಿಗೆ ವಿಚಿತ್ರವಾದ ತಳಮಳ. ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೇ ಒಳಗಡೆ ಇರುವವರೆಲ್ಲಾ ಖುಷಿಯಾಗಿದ್ದಾರೆ. ಐಸೋಲೇಷನ್ನಿನಲ್ಲಿ ಇರುವುದರಿಂದ ಸುರಕ್ಷಿತವಾಗಿಯೂ ಇದ್ದಾರೆ. ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ ಹೊರಗಡೆ ಕರೆಯುತ್ತಿದ್ದೇವೆ. ಅನಂತರ ಅವರನ್ನು ಮತ್ತು ತಂಡವನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಆಗುತ್ತಿದೆ. ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ. ಮನಸ್ಸು ಭಾರವಾಗಿದೆ. ಈ ಶೋ ನಿಲ್ಲುತ್ತಿದೆ ಅಂತಲ್ಲ. ಹೊರಗಡೆ ಗಾಳಿಯಲ್ಲಿ ಓಡಾಡುತ್ತಿರುವ ಕಣ್ಣಿಗೆ ಕಾಣದ ಅನಿಶ್ಚಿತತೆಯಿಂದ ಇನ್ನಿಲ್ಲದ ಕಳವಳ. ಎಲ್ಲರಿಗೂ ಈ ಕಳವಳಕ್ಕೊಂದು ಉತ್ತರ ಬೇಗ ಸಿಗಲಿ. ಸುರಕ್ಷಿತವಾಗಿರಿ’ ಎಂದಿದ್ದಾರೆ.
ಇನ್ನೂ ಇತ್ತೀಚೆಗೆ ಐಪಿಎಸ್ ಸೀಸನ್ 14 ಕೂಡ ರದ್ದಾಗಿತ್ತು. ಇದೀಗ ಅದೇ ಹಾದಿಯನ್ನೇ ಹಿಡಿದಿದೆ ಬಿಗ್ ಬಾಸ್. ಬಿಗ್ ಬಾಸ್ ನಲ್ಲಿ ಅರವಿಂದ್ , ಮಂಜು ಪಾವಗಡಗೆ ಹೆಚ್ಚು ಅಭಿಮಾನಿಗಳಿದ್ದರು. ಇವರಿಬ್ಬರು ಸಹ ಫಿನಾಲೆಗೆ ಬಂದು ಗೆಲ್ಲುವ ಸಾಧ್ಯತೆಗಳಿತ್ತು.
ಬಿಗ್ ಬಾಸ್ ಸೀಸನ್ 8 ರ ಸ್ಪರ್ಧಿಗಳು
ಧನುಶ್ರೀ , ನಿರ್ಮಲಾ , ಚಂದ್ರಕಲಾ ಮೋಹನ್ , ಗೀತಾ ಭಾರತಿ ಭಟ್ , ರಾಜೀವ್ , ವಿಶ್ವನಾಥ್ ಹಾವೇರಿ , ಶಂಕರ್ ಅಶ್ವಥ್ , ವೈಜಯಂತಿ ಆಡಿಗ, ಶಮಂತ್ ಗೌಡ , ರಘು ಗೌಡ , ಪ್ರಿಯಾಂಕಾ ತಿಮ್ಮೇಶ್ , ದಿವ್ಯಾ ಸುರೇಶ್ , ಅರವಿಂದ್ , ದಿವ್ಯಾ ಉರುಡುಗ , ಮಂಜು ಪಾವಗಡ , ಚಂದ್ರಚೂಡ್ ಚಕ್ರವರ್ತಿ , ಪ್ರಶಾಂತ್ ಸಂಬರಗಿ , ಶುಭಾ ಪುಂಜಾ , ನಿಧಿ ಸುಬ್ಬಯ್ಯ,
ಉಳಿದುಕೊಂಡಿದ್ದ ಸ್ಪರ್ಧಿಗಳು
ಅರವಿಂದ್ ಕೆ.ಪಿ., ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ
ಎಲಿಮಿನೇಟ್ ಆಗಿದ್ದವರು
ಧನುಶ್ರೀ , ನಿರ್ಮಲಾ , ಚಂದ್ರಕಲಾ ಮೋಹನ್ , ಗೀತಾ ಭಾರತಿ ಭಟ್ , ರಾಜೀವ್ , ವಿಶ್ವನಾಥ್ ಹಾವೇರಿ , ಶಂಕರ್ ಅಶ್ವಥ್ , ವೈಜಯಂತಿ ಆಡಿಗ