ಬೈಕ್ ಗಳ ಮಧ್ಯೆ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು vijayapura
ವಿಜಯಪುರ : ಎರಡು ಬೈಕ್ ಗಳ ಮಧ್ಯೆ ಅಪಘಾತವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಡಚಣ ತಾಲೂಕಿನ ಬರಡೋಲ ಗ್ರಾಮದಲ್ಲಿ ನಡೆದಿದೆ.
ಅರಬಾಜ್ ಶೇಖ್(23) ಮತ್ತು ಗೋಡಿಹಾಳ ಗ್ರಾಮದ ರಾಜೇಂದ್ರ ಬಸಪ್ಪ ಕಾಂಬಳೆ(45) ಅಪಘಾತದಲ್ಲಿ ಮೃತರಾದ ದುರ್ದೈವಿಗಳು.
ಅಪಘಾತದಲ್ಲಿ ಹಿಂಬದಿ ಸವಾರ ಸಿದ್ದರಾಯ ಅವರಿಗೆ ತೀವ್ರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣವೇ ಅಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.