ಬೆಂಗಳೂರು: ಬೈಕ್ ಗೆ ಬಸ್ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ಈ ಘಟನೆ ನಗರದ ಮಲ್ಲೇಶ್ವರಂ ಹತ್ತಿರದ ಹರಿಶ್ಚಂದ್ರ ಘಾಟ್ ಹತ್ತಿರ ನಡೆದಿದೆ. ಈ ಘಟನೆ ಕುರಿತು ಸ್ಪಷ್ಟನೆ ನೀಡಿರುವ ಬಿಎಂಟಿಸಿ, ಗಾಯತ್ರಿ ನಗರದ ಹತ್ತಿರ ವಿದ್ಯಾರ್ಥಿನಿ ಎಡಭಾಗದಿಂದ ಬಸ್ ಓವರ್ ಟೇಕ್ ಮಾಡಲು ಯತ್ನಿಸುತ್ತಿದ್ದ ವೇಳೆ ಎದುರು ಬರುತ್ತಿದ್ದ ಆಟೋ (Auto) ತಪ್ಪಿಸಲು ಹೋಗಿ ಸ್ಕಿಡ್ ಆಗಿ ಬಸ್ಸಿನ ಎಡಭಾಗದ ಹಿಂದಿನ ಚಕ್ರಕ್ಕೆ ಆಯ ತಪ್ಪಿ ಬಿದ್ದಿದ್ದಾಳೆ ಎಂದು ಬಿಎಂಟಿಸಿ ತಿಳಿಸಿದೆ.
ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಕುಸುಮಿತ ಸಾವನ್ನಪ್ಪಿದ್ದಾಳೆ. ಬಿಎಂಟಿಸಿ ಬಸ್ ಚಾಲಕನ ಅತಿ ವೇಗವೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದರು. ಸದ್ಯ ಬಿಎಂಟಿಸಿ ಸ್ಪಷ್ಟನೆ ನೀಡಿದ್ದಾರೆ.