ನೆಲಮಂಗಲ: ಟಿಪ್ಪರ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರಿನ ನೆಲಮಂಗಲ (Nelamangala) ತಾಲೂಕಿನ ಬಿಲ್ಲಿನಕೋಟೆಯ ಹತ್ತಿರ ನಡೆದಿದೆ. ಟಿಪ್ಪರ್ ಲಾರಿ ಮತ್ತು ಬೈಕ್ ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದಿವೆ. ಈ ವೇಳೆ ಬೈಕ್ ಸವಾರನ ಮೇಲೆ ಟಿಪ್ಪರ್ ಲಾರಿ ಹರಿದು ಹೋಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬೈಕ್ ಸವಾರನ ಗುರಿತು ಇನ್ನೂ ಪತ್ತೆಯಾಗಿಲ್ಲ.
ಟಿಪ್ಪರ್ ಲಾರಿ ಚಾಲಕನ ಅತಿಯಾದ ವೇಗವೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಘಟನೆ ನಡೆಯುತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.








