ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಕ್ಕಿ ಜ್ವರ ಹೇಗೆ ಹರಡುತ್ತೆ..? ಮುಂಜಾಗ್ರತಾ ಕ್ರಮಗಳೇನು..? | ಹಕ್ಕಿ ಜ್ವರ ಸಂಪೂರ್ಣ ಮಾಹಿತಿ..

Mahesh M Dhandu by Mahesh M Dhandu
January 5, 2021
in Newsbeat, Saaksha Special, ಎಸ್ ಸ್ಪೆಷಲ್
Bird Flu
Share on FacebookShare on TwitterShare on WhatsappShare on Telegram

ಹಕ್ಕಿ ಜ್ವರ ಹೇಗೆ ಹರಡುತ್ತೆ..? ಮುಂಜಾಗ್ರತಾ ಕ್ರಮಗಳೇನು..?

ಹಕ್ಕಿ ಜ್ವರ ಸಂಪೂರ್ಣ ಮಾಹಿತಿ..

Related posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

August 23, 2026
ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

August 23, 2026

ಕೊರೊನಾ ಕಾಟದ ಮಧ್ಯೆ ರಾಜಸ್ಥಾನ, ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ಕೇರಳ ಸೇರಿದಂತೆ ದೇಶದ ಹಲವಾರು ರಾಜ್ಯಗಳಲ್ಲಿ ಈಗ ಮತ್ತೆ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಭಾರತದಲ್ಲಿ ಹಕ್ಕಿ ಜ್ವರ ಮೊದಲು ಯಾವಾಗ ಪತ್ತೆಯಾಯ್ತು, ಈ ವೈರಸ್ ನಿಯಂತ್ರಣ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ.

ಹಕ್ಕಿ ಜ್ವರ ಭಾರತದಲ್ಲಿ 2005 ಫೆಬ್ರವರಿ 18 ರಂದು ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ ಮೊದಲು ಪತ್ತೆಯಾಗಿತ್ತು. ನಂತರ ಮಾರ್ಚ್, 2006ರಲ್ಲಿ ಮಧ್ಯಪ್ರದೇಶದಲ್ಲಿ ಎರಡನೇ ಬಾರಿಗೆ ಈ ಸೋಂಕು ಕಂಡು ಬಂದಿತು. ಈ ಅವಧಿಯಲ್ಲಿ ಈ ಸೋಂಕು ಏಶಿಯಾ, ಯೂರೋಪ್ ಮತ್ತು ಆಫ್ರಿಕಾ ಪ್ರದೇಶಗಳಲ್ಲಿ ಸುಮಾರು 400 ಜನರನ್ನು ಬಲಿ ತೆಗೆದುಕೊಂಡು ಲಕ್ಷಾಂತರ ಜನರನ್ನು ರೋಗಗ್ರಸ್ಥನ್ನಾಗಿ ಮಾಡಿತ್ತು.

ಈ ಸೋಂಕಿನ ನಿಯಂತ್ರಣ ಕಾರ್ಯಾಚರಣೆಯಲ್ಲಿ ಸೋಂಕಿ ತಲುಗುಲಿದ್ದ ಒಟ್ಟು 10.44 ಲಕ್ಷ ಪಕ್ಷಿಗಳನ್ನು ಆರಿಸಿ ಸಾಯಿಸಲಾಯಿತು. ಆಗಸ್ಟ್ 2006ರಲ್ಲಿ ದೇಶವು ಸೋಂಕಿನಿಂದ ಮುಕ್ತಗೊಂಡಿತು. ಆದರೆ 2017 ಜುಲೈನಲ್ಲಿ ಮಣಿಪುರ ಹಾಗೂ 2008ರಲ್ಲಿ ಪಶ್ಚಿಮ ಬಂಗಾಳ ಮತ್ತು ತ್ರಿಪುರದಲ್ಲಿ ಮತ್ತೆ ಹಕ್ಕಿ ಜ್ವರ ಕಾಣಿಸಿಕೊಂಡಿತ್ತು. ಆ ಸಂದರ್ಭದಲ್ಲಿ ಕ್ರಮವಾಗಿ 3.39 ಲಕ್ಷ ಹಾಗೂ 61.62 ಲಕ್ಷ ಪಕ್ಷಿಗಳನ್ನು ಕೊಲ್ಲಲಾಯಿತು. ಇದಾದ ಬಳಿಕ ಪ್ರತಿ ರಾಜ್ಯಗಳಲ್ಲಿ ಆಗಾಗ ಹಕ್ಕಿ ಜ್ವರ ಪತ್ತೆಯಾಗುತ್ತಿದೆ.

12 ನೇ ತರಗತಿ ಪ್ರಥಮ ವಿಭಾಗದಲ್ಲಿ ಉತ್ತೀರ್ಣರಾದ ಎಲ್ಲ ಬಾಲಕಿಯರಿಗೂ ಸ್ಕೂಟರ್ !

ಕಳೆದ ವರ್ಷ 2020ರ ಜನವರಿಯಲ್ಲಿ ಕೇರಳದಲ್ಲಿ ಮಾರ್ಚ್ ನಲ್ಲಿ ಬಿಹಾರದಲ್ಲಿ ಈ ಸೋಂಕು ಕಾಣಿಸಿಕೊಂಡಿತ್ತು. ಈ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಪಕ್ಷಿಗಳು ಹಕ್ಕಿ ಜ್ವರಕ್ಕೆ ತುತ್ತಾಗಿ ಸಾವನ್ನಪ್ಪಿವೆ. ಇದೀಗ ಮಧ್ಯಪ್ರದೇಶ, ಹರಿಯಾಣದಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು, ಸಾವಿರಾರು ಕಾಗೆಗಳು ಮತ್ತು ಕೋಳಿಗಳು ಸಾವನ್ನುಪ್ಪುತ್ತಿವೆ. Bird Flu

ಹಕ್ಕಿ ಜ್ವರ ಎಂದರೇನು?

ಪಕ್ಷಿಗಳಲ್ಲಿ ಏವಿಯನ್ ಇನ್ಫ್ಲುಯೆನ್ಸ್ ಟೈಪ್ ಎ ವೈರಸ್ ಗಳಿಂದ ಉಂಟಾಗುವ ಹಕ್ಕಿ ಜ್ವರ ಸಾಂಕ್ರಾಮಿಕ ರೋಗವಾಗಿದೆ. ಇದು ಸೌಮ್ಯದಿಂದ ತೀವ್ರ ಅನಾರೋಗ್ಯಕ್ಕೆ ಕಾರಣವಾಗಬಹುದು ಅಥವಾ ಪಕ್ಷಿಗಳಲ್ಲಿ ಹಠಾತ್ ಸಾವಿಗೂ ಕಾರಣವಾಗಬಹುದು. ಈ ಸೋಂಕಿಗೆ ಮುಖ್ಯ ಕಾರಣ ಎಚ್5ಎನ್1 ಎಂಬ ಹೆಸರಿನ ವೈರಸ್. ಇದೊಂದು ತೀವ್ರ ಸಾಂಕ್ರಾಮಿಕ ಪಿಡುಗುಗಾಗಿದೆ.
ಸಾಮಾನ್ಯವಾಗಿ ನಮ್ಮ ದೇಶೀಯ ಕೋಳಿಗಳು ದುರ್ಬಲವಾಗಿರುತ್ತವೆ. ಹೀಗಾಗಿ ಅವುಗಳಿಗೆ ಸುಲಭವಾಗಿ ಸೋಂಕು ತಗಲುತ್ತವೆ.

ಇನ್ನು ಸುಲಭವಾಗಿ ಮನುಷ್ಯರಿಗೆ ಈ ಸೋಂಕು ತಗುಲಿಸುವುದಿಲ್ಲ. ಆದರೆ, ಕೆಲವೊಮ್ಮೆ ಸೋಂಕಿತ ಕೋಳಿಗಳೊಂದಿಗೆ ಸಂಪರ್ಕ ಹೊಂದಿರುವ ಮನುಷ್ಯರಿಗೆ ಈ ಸೋಂಕು ಹರಡಬಹುದು. 2005-2006 ರಲ್ಲಿ ಈ ರೋಗಾಣು ಏಶಿಯಾ, ಯೂರೋಪ್ ಮತ್ತು ಆಫ್ರಿಕಾ ಪ್ರದೇಶಗಳಲ್ಲಿ ಸುಮಾರು 400 ಜನರನ್ನು ಬಲಿ ತೆಗೆದುಕೊಂಡು ಲಕ್ಷಾಂತರ ಜನರನ್ನು ರೋಗಗ್ರಸ್ಥನ್ನಾಗಿ ಮಾಡಿತ್ತು.

ಸೋಂಕಿತ ಪಕ್ಷಿಗಳ ಲಕ್ಷಣಗಳೇನು..?

ಹಕ್ಕಿ ಜ್ವರ ಕಾಣಿಸಿಕೊಂಡ ಪಕ್ಷಿಗಳಲ್ಲಿ ಶಕ್ತಿ ಮತ್ತು ಹಸಿವಿನ ಕೊರತೆ ಕಾಣುತ್ತೆ. ಕೆಮ್ಮು, ಸೀನುವಿಕೆ ಹಾಗೂ ಮೂಗಿನಲ್ಲಿ ದ್ರವ ಬರುವುದು, ತಲೆ ಮತ್ತು ಕಾಲುಗಳು ಊದಿಕೊಳ್ಳುತ್ತವೆ

ಮನುಷ್ಯರಲ್ಲಿ ಕಂಡು ಬರುವ ಲಕ್ಷಣಗಳೇನು..?

ಹಕ್ಕಿ ಜ್ವರದ ಸೋಂಕಿಗೆ ಒಳಗಾಗುವ ವ್ಯಕ್ತಿಗಳಲ್ಲಿ 2-3 ದಿನದಲ್ಲಿ ರೋಗ ಲಕ್ಷಣಗಳು ಪ್ರಕಟವಾಗುತ್ತವೆ. ಅತಿಯಾದ ಜ್ವರ, ಕೆಮ್ಮು, ತಲೆನೋವು, ಉಸಿರಾಡಲು ತೊಂದರೆಯಾಗುವುದು ಕಾಯಿಲೆಯ ಲಕ್ಷಣಗಳು. ಎಕ್ಸ್‍ರೇ ಪರೀಕ್ಷೆಯಿಂದ ಎದೆಯಲ್ಲಿ ಉಂಟಾಗಿರುವ ಬದಲಾವಣೆಗಳು ಎದ್ದು ಕಾಣುತ್ತವೆ.

Bird Flu

ಪಕ್ಷಿಗಳ ನಡುವೆ ಹಕ್ಕಿ ಜ್ವರ ಹೇಗೆ ಹರಡುತ್ತದೆ..?

ಸೋಂಕಿತ ಪಕ್ಷಿಗಳಿಂದ ಮೂಗಿನ ಮತ್ತು ಉಸಿರಾಟದ ನೇರ ಸಂಪರ್ಕದಿಂದ, ಪಕ್ಷಿಯ ಮಲ-ಮೂತ್ರವನ್ನು ನೇರ ಮುಟ್ಟುವುದರಿಂದ ಹಕ್ಕಿ ಜ್ವರ ಹರಡುತ್ತೆ.
ಆಹಾರ ಮತ್ತು ನೀರಿನ ಮಾಲಿನ್ಯ, ಕಲುಷಿತ ಉಪಕರಣಗಳ ಬಳಕೆಯಿಂದಲೂ ಈ ಸೋಂಕು ಹರಡುತ್ತದೆ.

ಸೋಂಕಿನಿಂದ ಸಾಕು ಪಕ್ಷಿಗಳನ್ನು ಸುರಕ್ಷಿತವಾಗಿಡುವುದು ಹೇಗೆ?

ಸಾಕು ಪಕ್ಷಿಗಳನ್ನು ಕಾಡು ಪಕ್ಷಿಗಳು ಮತ್ತು ಅವುಗಳ ಹಿಕ್ಕೆಗಳಿಂದ ದೂರವಿಡಬೇಕು. ಸೂಕ್ಷ್ಮ ಬಲೆ ಹೊಂದಿರುವ ಆವರಣವನ್ನು ಪಂಜರದ ಮೇಲೆ ಬಳಸಬೇಕು. ರೋಗ ಲಕ್ಷಣ ಕಂಡುಬಂದಲ್ಲಿ ಬೇರೆ ಪಕ್ಷಿಗಳನ್ನು ಕನಿಷ್ಠ 21 ದಿನಗಳವರೆಗೆ ದೂರವಿರಿಸಬೇಕು.

ಸಾಕು ಹಕ್ಕಿ ಕಾಯಿಲೆಗೊಳಗಾದರೆ ಅಥವಾ ಸತ್ತರೆ ಏನು ಮಾಡಬೇಕು?
ಮನೆಯಲ್ಲಿರುವ ಪಕ್ಷಿಗಳು ಅನಾರೋಗ್ಯಕ್ಕೆ ತುತ್ತಾದರೆ ತಕ್ಷಣ ಪಶುವೈದ್ಯರನ್ನು ಸಂಪರ್ಕಿಸಿ, ಚಿಕಿತ್ಸೆ ಕೊಡಿಸಬೇಕು. ಬಳಿಕ ಆರೋಗ್ಯಕರ ಪಕ್ಷಿಗಳಿಂದ ರೋಗಗ್ರಸ್ತ ಪಕ್ಷಗಳನ್ನು ದೂರವಿಡಬೇಕು. ಇನ್ನು ಕಾಲ ಕಾಲಕ್ಕೆ ಪಂಜರವನ್ನು ತೊಳೆದು ಸೋಂಕು ರಹಿತಗೊಳಿಸುತ್ತಿರಬೇಕು. ಒಂದು ವೇಳೆ ಸೋಂಕಿನಿಂದ ಮೃತಪಟ್ಟರೇ ಪಕ್ಷಿಗಳ ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿರಿಸಿ, ಬಿಗಿಯಾಗಿ ಕಟ್ಟಿ ಬಳಿಕ ವಿಲೇವಾರಿ ಮಾಡಬೇಕು.

ನಾವು ತೆಗೆದುಕೊಳ್ಳಬೇಕಾದ ಮುನ್ನೆಚರಿಕಾ ಕ್ರಮಗಳೇನು..?
ಪಂಜರವನ್ನು ತೊಳೆಯುವ ವೇಳೆ ಕಡ್ಡಾಯವಾಗಿ ಮಾಸ್ಕ್ ಮತ್ತು ಗ್ಲೌಸ್ ಧರಿಸಿರಬೇಕು. ಅದೇ ರೀತಿ ಸತ್ತ ಪಕ್ಷಿಗಳನ್ನು ವಿಲೇವಾರಿ ಮಾಡುವ ಸಂದರ್ಭದಲ್ಲೂ ಕೂಡ ಮಾಸ್ಕ್ ಮತ್ತು ಗ್ಲೌಸ್ ಧರಿಸಿರಬೇಕು. ಪಕ್ಷಿ ಮತ್ತು ಅದರ ಪಂಜರವನ್ನು ಕ್ಲೀನ್ ಮಾಡಿದ ಬಳಿಕ ಸೋಪ್ ನಿಂದ ಕೈಗಳನ್ನು ಚೆನ್ನಾಗಿ ಕ್ಲೀನ್ ಮಾಡಿಕೊಳ್ಳಬೇಕು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bird fluhakki jwaraindia
ShareTweetSendShare
Join us on:

Related Posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

by Shwetha
August 23, 2026
0

ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

by Shwetha
August 23, 2026
0

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಇ20 (ಶೇ. 20ರಷ್ಟು ಎಥೆನಾಲ್ ಮಿಶ್ರಿತ ಇಂಧನ) ನೀತಿಯು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನೇರ ಕಾರಣವಾಗಿದೆ ಎಂದು ಕಾಂಗ್ರೆಸ್...

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

by Shwetha
August 23, 2026
0

ಬೆಂಗಳೂರು: ನೈಸ್ ರಸ್ತೆಯ ಅಕ್ರಮ ಟೋಲ್ ವಸೂಲಾತಿ ವಿರುದ್ಧ ಸಮರ ಸಾರಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದೀಗ ಮತ್ತಷ್ಟು ಆಕ್ರಮಣಕಾರಿ ನಿಲುವು ತಳೆದಿದ್ದಾರೆ. ಎಫ್‌ಐಆರ್ ದಾಖಲಾದರೂ...

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

by Shwetha
August 23, 2026
0

ತಿರುವನಂತಪುರಂ: ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿದ್ದ ಮಂಗಳೂರು ಪ್ರದೇಶವನ್ನು ನೈರುತ್ಯ ರೈಲ್ವೆಗೆ ವರ್ಗಾವಣೆ ಮಾಡಿ ರೈಲ್ವೆ ಮಂಡಳಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ತೀವ್ರ ಆಕ್ಷೇಪ...

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

by Shwetha
August 23, 2026
0

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಿಬಿಐ ರಾಜ್ಯಪಾಲರಿಗೆ ಪತ್ರ ಬರೆದಿರುವುದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram